Homeಅಂತರಾಷ್ಟ್ರೀಯಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಜನಿಸಿದ ತನ್ನ ನವಜಾತ ಅವಳಿಗಳ ಜನನವನ್ನು ನೋಂದಾಯಿಸಲು ಅಬು ಅಲ್-ಕುಮ್ಸನ್ ಮಂಗಳವಾರ ಸೆಂಟ್ರಲ್ ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿರುವ ತನ್ನ ಮನೆಯಿಂದ ಹೊರಟಿದ್ದರು. ಅವರಿಗೆ ಅಸ್ಸರ್ ಎಂಬ ಗಂಡು ಮತ್ತು ಐಸೆಲ್ ಎಂಬ ಹೆಣ್ಣು ಮಗು ಜನಿಸಿದ್ದವು.

ಅವರು ಮನೆ ಬಿಟ್ಟ ಗಂಟೆಗಳ ನಂತರ, ತನ್ನ ನೆರೆಹೊರೆಯವರಿಂದ ಕರೆ ಸ್ವೀಕರಿಸಿದ್ದು, ಅವರ ಕುಟುಂಬವು ಆಶ್ರಯ ಪಡೆದ ಮನೆ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂಬ ವಿಷಯ ತಿಳಿದು ಆಘಾತಗೊಂಡಿದ್ದಾರೆ.

ಅವರ ಪತ್ನಿ ಜೌಮಾನ ಅರಾಫಾ, ಆಕೆಯ ತಾಯಿ ಮತ್ತು ನವಜಾತ ಅವಳಿ ಮಕ್ಕಳು ಇಸ್ರೇಲಿ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ. “ಏನಾಯಿತು ಎಂದು ನನಗೆ ತಿಳಿದಿಲ್ಲ, ನನ್ನ ಮನೆಗೆ ಶೆಲ್ ದಾಳಿಯಾಗಿದೆ ಎಂದು ಮಾತ್ರ ನನಗೆ ಹೇಳಲಾಗಿದೆ” ಎಂದು ಅಲ್-ಕುಮ್ಸನ್ ಹೇಳಿದ್ದಾರೆ.

ಅರಾಫಾ ಎಂಬ ವೈದ್ಯ ತನ್ನ ನವಜಾತ ಶಿಶುಗಳ ಆಗಮನವನ್ನು ಆಗಸ್ಟ್ 10 ರಂದು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿ, ತನ್ನ ಪೋಸ್ಟ್‌ನಲ್ಲಿ “ಪವಾಡ” ಎಂದು ಕರೆದಿದ್ದಾಳೆ. ಮಾಧ್ಯಮಗಳ ಪ್ರಕಾರ, ಯುದ್ಧ ಪ್ರಾರಂಭವಾಗುವ ತಿಂಗಳುಗಳ ಮೊದಲು ದಂಪತಿಗಳು ಕಳೆದ ಬೇಸಿಗೆಯಲ್ಲಿ ವಿವಾಹವಾಗಿದ್ದರು.

ಯುದ್ಧದ ಆರಂಭಿಕ ವಾರಗಳಲ್ಲಿ ಗಾಜಾ ನಗರವನ್ನು ಸ್ಥಳಾಂತರಿಸಲು ಇಸ್ರೇಲ್‌ನ ಆದೇಶಗಳನ್ನು ಅನುಸರಿಸಿದ ಸಾವಿರಾರು ಪ್ಯಾಲೆಸ್ಟೀನಿಯಾದವರಲ್ಲಿ ಅಲ್-ಕುಮ್ಸಾನ್ ಕೂಡ ಸೇರಿದ್ದಾನೆ. ಗಾಜಾ ಪಟ್ಟಿಯಾದ್ಯಂತ ಇಸ್ರೇಲ್‌ನ ಬಾಂಬ್ ದಾಳಿಯಿಂದ ತನ್ನ ಗರ್ಭಿಣಿ ಹೆಂಡತಿಯನ್ನು ರಕ್ಷಿಸುವ ಹತಾಶ ಪ್ರಯತ್ನದಲ್ಲಿ ಅವನು ತನ್ನ ಕುಟುಂಬವನ್ನು ಉತ್ತರ ಗಾಜಾದಿಂದ ದೇರ್ ಅಲ್-ಬಾಲಾಹ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಿಸಿದ್ದನು.

ಮಂಗಳವಾರ, ಅಲ್-ಕುಮ್ಸನ್ ತನ್ನ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಸ್ವೀಕರಿಸಲು ಸ್ಥಳೀಯ ಸರ್ಕಾರಿ ಕಚೇರಿಗೆ ಹೋದರು. ನಂತರ, ಅವರು ತಮ್ಮ ಕುಟುಂಬದ ದುರಂತ ಸಾವಿನ ತಿಳಿದುಕೊಳ್ಳಲು ಮಾತ್ರ ಸಾಧ್ಯವಾಯಿತು.

ನಂತರ ಅವರು ತಮ್ಮ ಕುಟುಂಬಸ್ಥರ ದೇಹ ಸ್ವೀಕರಿಸಲು ಸೆಂಟ್ರಲ್ ಗಾಜಾದ ಅಲ್ ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಬಂದರು, ಅಲ್ಲಿ ಅವರು ತಮ್ಮ ಕುಟುಂಬವನ್ನು ಕೊನೆಯ ಬಾರಿಗೆ ನೋಡುವ ಹಂಬಲದಿಂದ ಅಳುತ್ತಿದ್ದರು.

“ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಅವರನ್ನು ನೋಡಲು ಅವಕಾಶ ಮಾಡಿಕೊಡಿ… ಅವಳು ಈಗಷ್ಟೇ ಜನ್ಮ ನೀಡಿದಳು. ದಯವಿಟ್ಟು ನನಗೆ ಅವಳನ್ನು ನೋಡಲು ಅವಕಾಶ ಮಾಡಿಕೊಡಿ” ಎಂದು ಅವರು ಬೇಡಿಕೊಳ್ಳುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಲ್-ಕುಮ್ಸನ್ ಮತ್ತು ಅವರ ಕುಟುಂಬವು ಅಂತಿಮ ಪ್ರಾರ್ಥನೆ ಸಲ್ಲಿಸಿದ ನಂತರ ನವಜಾತ ಶಿಶುಗಳನ್ನು ಅವರ ತಾಯಿಯ ಜೊತೆಗೆ ಸಮಾಧಿ ಮಾಡಲಾಯಿತು.

ಅಲ್ ಜಜೀರಾ ಜೊತೆ ಮಾತನಾಡುತ್ತಾ, ದಿಗ್ಭ್ರಮೆಗೊಂಡ ಅಲ್-ಕುಮ್ಸನ್, ತನ್ನ ಮಕ್ಕಳ ಜನ್ಮವನ್ನು ಆಚರಿಸಲು ಎಂದಿಗೂ ಅವಕಾಶವನ್ನು ಹೊಂದಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

“ನಾನು ನನ್ನ ಮಕ್ಕಳ ಜನನ ಪ್ರಮಾಣಪತ್ರವನ್ನು ಪಡೆಯಲು ಹೋಗಿದ್ದೆ, ನನ್ನ ಹೆಂಡತಿ ದಿನಗಳ ಹಿಂದೆ ಜನ್ಮ ನೀಡಿದ್ದಳು, ಅವರ ಜನ್ಮವನ್ನು ಆಚರಿಸಲು ನನಗೆ ಅವಕಾಶವಿರಲಿಲ್ಲ, ಅವಳಿಗೆ ಸಿ-ಸೆಕ್ಷನ್ ಹೆರಿಗೆಯಾಗಿತ್ತು. ದಾಳಿ ಸಂದರ್ಭದಲ್ಲಿ ಆಕೆ ತುಂಬಾ ಸುಸ್ತಾಗಿದ್ದಳು, ಅವಳು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ” ಎಂದು ಅವರು ಅಲ್ ಜಜೀರಾಗೆ ತಿಳಿಸಿದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ಕಾರ್ಯಾಚರಣೆಯಿಂದಾಗಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ತಮ್ಮ ಹೆಂಡತಿಯರನ್ನು ಕಳೆದುಕೊಂಡಿದ್ದಾರೆ, ಇದೀಗ ಯುದ್ಧದ 11 ನೇ ತಿಂಗಳಿನಲ್ಲಿದೆ.

ಮಂಗಳವಾರದ ಗಾಜಾ ಆರೋಗ್ಯ ಸಚಿವಾಲಯದ ಇತ್ತೀಚಿನ ನವೀಕರಿಸಿದ ವರದಿಯ ಪ್ರಕಾರ, ಯುದ್ಧದಲ್ಲಿ ಕನಿಷ್ಠ 39,929 ಜನರು ಸಾವನ್ನಪ್ಪಿದ್ದಾರೆ, ಸತ್ತವರಲ್ಲಿ ಗಮನಾರ್ಹ ಭಾಗವು ಮಹಿಳೆಯರು ಮತ್ತು ಮಕ್ಕಳೆ ಇದ್ದಾರೆ.

ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7, 2023 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 115 ಶಿಶುಗಳು ಕೊಲ್ಲಲ್ಪಟ್ಟಿವೆ. ಇಸ್ರೇಲ್‌ನ ಕ್ರೂರ ಆಕ್ರಮಣವು ಸಾವಿರಾರು ಅನಾಥರನ್ನು ಬಿಟ್ಟಿದೆ. ಗಾಜಾದಲ್ಲಿ ಸುಮಾರು 17,000 ಮಕ್ಕಳು ತಮ್ಮ ಪೋಷಕರ ಜೊತೆಯಲ್ಲಿಲ್ಲ ಎಂದು ಯುಎನ್ ಫೆಬ್ರವರಿಯಲ್ಲಿ ಅಂದಾಜಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...