Homeಮುಖಪುಟಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು ಬಲಿ

ಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು ಬಲಿ

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆ ಮೂಲಕ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದ ನಡುವೆಯೇ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಗಾಝಾದ ದಕ್ಷಿಣ ನಗರವಾದ ರಫಾದ ಮೇಲೆ ಸೋಮವಾರ (ಮೇ 6) ರಾತ್ರಿ ವಾಯುದಾಳಿ ನಡೆಸುವ ಮೂಲಕ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಇಸ್ರೇಲ್ ಹೇಳಿದೆ.

ದಾಳಿಯಲ್ಲಿ ಕನಿಷ್ಠ 12 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ರಫಾದಲ್ಲಿ 1 ಮಿಲಿಯನ್‌ಗೂ ಹೆಚ್ಚು ಪ್ಯಾಲೆಸ್ತೀನಿಯರು ಆಶ್ರಯ ಪಡೆದಿದ್ದಾರೆ. ಗಾಝಾದ ಇತರ ಭಾಗಗಳು ಇಸ್ರೇಲ್ ಆಕ್ರಮಣಕ್ಕೆ ಸ್ಮಶಾನದಂತೆ ಮಾರ್ಪಟ್ಟಿದ್ದು, ರಫಾದಲ್ಲಿ ಮಾತ್ರ ಜನರು ಉಸಿರಾಡುವ ಪರಿಸ್ಥಿತಿಯಿದೆ. ಅಂತಹ ರಫಾದ ಮೇಲೆ ದಾಳಿ ನಡೆಸುವುದಾಗಿ ಪದೇ ಪದೇ ಹೇಳುತ್ತಿದ್ದ ಇಸ್ರೇಲ್, ಕೊನೆಗೂ ದಾಳಿ ನಡೆಸಿಯೇ ಬಿಟ್ಟಿದೆ.

ಗಾಝಾದ ಇತರೆಡಗಳಲ್ಲಿ ಎಲ್ಲೂ ಬದುಕಲು ಸಾಧ್ಯವಿಲ್ಲದೆ ಲಕ್ಷಾಂತರು ಜನರು ರಫಾಕ್ಕೆ ತೆರಳಿ ನಿರಾಶ್ರಿತ ಶಿಬಿರಗಳಲ್ಲಿ ಇದ್ದಾರೆ. ಸೋಮವಾರ ರಫಾದ ಒಂದು ಭಾಗದ ಜನರಿಗೆ ಸ್ಥಳ ಬಿಟ್ಟು ತೆರಳುವಂತೆ ಇಸ್ರೇಲ್ ಸೂಚಿಸಿತ್ತು. ಈ ಬೆನ್ನಲ್ಲೇ ರಾತ್ರಿ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ಕದನ ವಿರಾಮಕ್ಕೆ ಒಪ್ಪಿದೆ ಸೂಚಿಸಿದ್ದರಿಂದ ಸೋಮವಾರ ಸಂಜೆ ಜನರು ಸಂಭ್ರಮಾಚರಣೆ ನಡೆಸಿದ್ದರು. ಆದರೆ, ರಾತ್ರಿ ಇಸ್ರೇಲ್ ನಡೆಸಿದ ದಾಳಿಗೆ ಅವರು ದಿಗ್ಭ್ರಮೆಗೊಂಡಿದ್ದಾರೆ ಮತ್ತು ನಿರಾಶೆಯುಂಟಾಗಿದೆ.

ಗಾಝಾದ ಜನರಿಗೆ ಅಗತ್ಯ ಮಾನವೀಯ ನೆರವು ಸರಬರಾಜು ಆಗುತ್ತಿರುವ ಮತ್ತು ಗಾಝಾ ಮತ್ತು ಈಜಿಫ್ಟ್ ನಡುವಿನ ಏಕೈಕ ದಾರಿಯಾದ ‘ರಫಾ ಕ್ರಾಸಿಂಗ್‌’ ಅನ್ನು ವಶಪಡಿಸಿಕೊಳ್ಳುವುದು ಇಸ್ರೇಲ್‌ನ ಉದ್ದೇಶ ಎಂದು ವರದಿಗಳು ಹೇಳಿವೆ.

ಗಾಝಾದ ಜನತೆಗೆ ಜೀವ ಉಳಿಸಿಕೊಳ್ಳಲು ಏಕೈಕ ಸ್ಥಳವಾದ ರಫಾ ಮೇಲೆ ಇಸ್ರೇಲ್ ದಾಳಿ ಆರಂಭಿಸಿರುವುದಕ್ಕೆ ಯುಎಸ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುವುದಿಲ್ಲ ಎಂಬ ಭರವಸೆ ನಮಗಿದೆ ಎಂದಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...