Homeಮುಖಪುಟಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು ಬಲಿ

ಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು ಬಲಿ

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆ ಮೂಲಕ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದ ನಡುವೆಯೇ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಗಾಝಾದ ದಕ್ಷಿಣ ನಗರವಾದ ರಫಾದ ಮೇಲೆ ಸೋಮವಾರ (ಮೇ 6) ರಾತ್ರಿ ವಾಯುದಾಳಿ ನಡೆಸುವ ಮೂಲಕ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಇಸ್ರೇಲ್ ಹೇಳಿದೆ.

ದಾಳಿಯಲ್ಲಿ ಕನಿಷ್ಠ 12 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ರಫಾದಲ್ಲಿ 1 ಮಿಲಿಯನ್‌ಗೂ ಹೆಚ್ಚು ಪ್ಯಾಲೆಸ್ತೀನಿಯರು ಆಶ್ರಯ ಪಡೆದಿದ್ದಾರೆ. ಗಾಝಾದ ಇತರ ಭಾಗಗಳು ಇಸ್ರೇಲ್ ಆಕ್ರಮಣಕ್ಕೆ ಸ್ಮಶಾನದಂತೆ ಮಾರ್ಪಟ್ಟಿದ್ದು, ರಫಾದಲ್ಲಿ ಮಾತ್ರ ಜನರು ಉಸಿರಾಡುವ ಪರಿಸ್ಥಿತಿಯಿದೆ. ಅಂತಹ ರಫಾದ ಮೇಲೆ ದಾಳಿ ನಡೆಸುವುದಾಗಿ ಪದೇ ಪದೇ ಹೇಳುತ್ತಿದ್ದ ಇಸ್ರೇಲ್, ಕೊನೆಗೂ ದಾಳಿ ನಡೆಸಿಯೇ ಬಿಟ್ಟಿದೆ.

ಗಾಝಾದ ಇತರೆಡಗಳಲ್ಲಿ ಎಲ್ಲೂ ಬದುಕಲು ಸಾಧ್ಯವಿಲ್ಲದೆ ಲಕ್ಷಾಂತರು ಜನರು ರಫಾಕ್ಕೆ ತೆರಳಿ ನಿರಾಶ್ರಿತ ಶಿಬಿರಗಳಲ್ಲಿ ಇದ್ದಾರೆ. ಸೋಮವಾರ ರಫಾದ ಒಂದು ಭಾಗದ ಜನರಿಗೆ ಸ್ಥಳ ಬಿಟ್ಟು ತೆರಳುವಂತೆ ಇಸ್ರೇಲ್ ಸೂಚಿಸಿತ್ತು. ಈ ಬೆನ್ನಲ್ಲೇ ರಾತ್ರಿ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಹಮಾಸ್ ಕದನ ವಿರಾಮಕ್ಕೆ ಒಪ್ಪಿದೆ ಸೂಚಿಸಿದ್ದರಿಂದ ಸೋಮವಾರ ಸಂಜೆ ಜನರು ಸಂಭ್ರಮಾಚರಣೆ ನಡೆಸಿದ್ದರು. ಆದರೆ, ರಾತ್ರಿ ಇಸ್ರೇಲ್ ನಡೆಸಿದ ದಾಳಿಗೆ ಅವರು ದಿಗ್ಭ್ರಮೆಗೊಂಡಿದ್ದಾರೆ ಮತ್ತು ನಿರಾಶೆಯುಂಟಾಗಿದೆ.

ಗಾಝಾದ ಜನರಿಗೆ ಅಗತ್ಯ ಮಾನವೀಯ ನೆರವು ಸರಬರಾಜು ಆಗುತ್ತಿರುವ ಮತ್ತು ಗಾಝಾ ಮತ್ತು ಈಜಿಫ್ಟ್ ನಡುವಿನ ಏಕೈಕ ದಾರಿಯಾದ ‘ರಫಾ ಕ್ರಾಸಿಂಗ್‌’ ಅನ್ನು ವಶಪಡಿಸಿಕೊಳ್ಳುವುದು ಇಸ್ರೇಲ್‌ನ ಉದ್ದೇಶ ಎಂದು ವರದಿಗಳು ಹೇಳಿವೆ.

ಗಾಝಾದ ಜನತೆಗೆ ಜೀವ ಉಳಿಸಿಕೊಳ್ಳಲು ಏಕೈಕ ಸ್ಥಳವಾದ ರಫಾ ಮೇಲೆ ಇಸ್ರೇಲ್ ದಾಳಿ ಆರಂಭಿಸಿರುವುದಕ್ಕೆ ಯುಎಸ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸುವುದಿಲ್ಲ ಎಂಬ ಭರವಸೆ ನಮಗಿದೆ ಎಂದಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡಿರುವುದನ್ನು ಸಮರ್ಥಿಸಿಕೊಂಡ ನಿರ್ಮಲಾ ಸೀತಾರಾಮನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...