Homeಅಂತರಾಷ್ಟ್ರೀಯಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

ಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

- Advertisement -
- Advertisement -

ಗಾಝಾ ನಗರವನ್ನು ತನ್ನ ವಶಕ್ಕೆ ಪಡೆಯಲು ಇಸ್ರೇಲ್ ಮುಂದಾಗಿದ್ದು, ಇದರ ಆರಂಭಿಕ ಹಂತವಾಗಿ ಪ್ಯಾಲೆಸ್ತೀನಿಯರನ್ನು ಯುದ್ದ ವಲಯಗಳಿಂದ (ತಮ್ಮ ಸ್ವಂತ ಊರುಗಳಿಂದ) ದಕ್ಷಿಣ ಗಾಝಾಗೆ ಬಲವಂತವಾಗಿ ಸ್ಥಳಾಂತರಿಸುವ ಸಿದ್ದತೆಯನ್ನು ಭಾನುವಾರ (ಆ.17) ಪ್ರಾರಂಭಿಸಿದೆ.

ಇಸ್ರೇಲ್ ಸೇನೆಯ ಅರೇಬಿಕ್ ಭಾಷೆಯ ವಕ್ತಾರ ಅವಿಚಾಯ್ ಅಡ್ರೇ ಶನಿವಾರ, ಗಾಝಾ ನಿವಾಸಿಗಳಿಗೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಿಹಾರ ಸಂಸ್ಥೆಗಳು ಕರೀಂ ಅಬೂ ಸಲೀಂ ಅಥವಾ ಕೆರೆಮ್ ಶಾಲೋಮ್ ಮೂಲಕ ಸಾಗಿಸುವ ಟೆಂಟ್‌ಗಳು ಮತ್ತು ಇತರ ಆಶ್ರಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜನರ ಸ್ಥಳಾಂತರ ಯೋಜನೆಯ ಬಗ್ಗೆ ಅಥವಾ ಮಾನವೀಯ ನೆರವು ನೀಡುವಲ್ಲಿ ಅದರ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಉಳಿದಿರುವ ಎರಡು ಹಮಾಸ್ ಭದ್ರಕೋಟೆಗಳಾದ ಉತ್ತರದಲ್ಲಿ ಗಾಝಾ ನಗರ ಮತ್ತು ದಕ್ಷಿಣಕ್ಕೆ ಅಲ್-ಮವಾಸಿಯನ್ನು ‘ಕೆಡವಲು’ ಸೇನೆಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಘೋಷಿಸಿದ ಕೆಲ ದಿನಗಳಲ್ಲೇ ಜನರ ಬಲವಂತದ ಸ್ಥಳಾಂತರಕ್ಕೆ ಇಸ್ರೇಲ್ ಸೇನೆ ಮುಂದಾಗಿದೆ.

ಗಾಝಾ ನಗರದ ಜನಸಂಖ್ಯೆ ಪ್ರಸ್ತುತ ಸುಮಾರು ಒಂದು ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಷ್ಟೂ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆಯೇ?..ದಕ್ಷಿಣ ಗಾಝಾದಲ್ಲಿ ಅವರನ್ನು ಸ್ಥಳಾಂತರಿಸುವ ಪ್ರದೇಶ ಯಾವುದು? ಈಜಿಪ್ಟ್‌ ಗಡಿಯ ಸಮೀಪವಿರುವ ರಫಾ ಪ್ರದೇಶವೇ? ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿಲ್ಲ.

ಜನರನ್ನು ಬಲವಂತವಾಗಿ ಸ್ಥಳಾಂತರಿಸಲು ಮುಂದಾಗಿರುವ ಇಸ್ರೇಲ್‌ನ ಯೋಜನೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕಳೆದ ಗುರುವಾರ ಈ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆ, ಇಸ್ರೇಲ್ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಿದರೆ, ದಕ್ಷಿಣ ಗಾಝಾದಲ್ಲಿ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಲಿದೆ ಎಂದು ಎಚ್ಚರಿಸಿದೆ.

ಹಮಾಸ್‌ನ ಮಿತ್ರ ಸಂಘಟನೆಯಾದ ‘ಇಸ್ಲಾಮಿಕ್ ಜಿಹಾದ್’ ಇಸ್ರೇಲ್ ಸೇನೆಯ ಘೋಷಣೆಯನ್ನು “ಗಾಝಾ ನಗರವನ್ನು ಆಕ್ರಮಿಸಿಕೊಳ್ಳುವ ಕ್ರೂರ ದಾಳಿಯ ಭಾಗ ಮತ್ತು ಅಂತಾರಾಷ್ಟ್ರೀಯ ಸಂಪ್ರದಾಯಗಳ ಸ್ಪಷ್ಟ ಮತ್ತು ನಿರ್ಲಜ್ಜ ಅಪಹಾಸ್ಯ” ಎಂದು ಬಣ್ಣಿಸಿದೆ.

“ಹಸಿವು, ಹತ್ಯಾಕಾಂಡ ನಡುವೆ ಜನರು ಪಲಾಯನ ಮಾಡುವಂತೆ ಒತ್ತಾಯಿಸುವುದು ಮಾನವೀಯತೆಯ ವಿರುದ್ಧ ನಡೆಯುತ್ತಿರುವ ಅಪರಾಧವಾಗಿದೆ. ಗಾಝಾದಲ್ಲಿ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದೈನಂದಿನ ನಡೆಯುತ್ತಿರುವ ಆಕ್ರಮಣ ಒಂದೇ ರೀತಿಯದ್ದು ಎಂದು ಇಸ್ಲಾಮಿಕ್ ಜಿಹಾದ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಿಂದ ಸಾವಿಗೀಡಾದವರ ಅಂದಾಜು ಸಂಖ್ಯೆ 61,827ಕ್ಕೆ ಏರಿಕೆಯಾಗಿದ್ದು, ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಸಿವು, ಅಪೌಷ್ಟಿಕತೆಯಿಂದ ಇದುವರೆಗೆ 251 ಜನರು ಸಾವನ್ನಪ್ಪಿದ್ದಾರೆ.

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...