Homeಅಂತರಾಷ್ಟ್ರೀಯಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

ಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

- Advertisement -
- Advertisement -

ಗಾಝಾ ನಗರವನ್ನು ತನ್ನ ವಶಕ್ಕೆ ಪಡೆಯಲು ಇಸ್ರೇಲ್ ಮುಂದಾಗಿದ್ದು, ಇದರ ಆರಂಭಿಕ ಹಂತವಾಗಿ ಪ್ಯಾಲೆಸ್ತೀನಿಯರನ್ನು ಯುದ್ದ ವಲಯಗಳಿಂದ (ತಮ್ಮ ಸ್ವಂತ ಊರುಗಳಿಂದ) ದಕ್ಷಿಣ ಗಾಝಾಗೆ ಬಲವಂತವಾಗಿ ಸ್ಥಳಾಂತರಿಸುವ ಸಿದ್ದತೆಯನ್ನು ಭಾನುವಾರ (ಆ.17) ಪ್ರಾರಂಭಿಸಿದೆ.

ಇಸ್ರೇಲ್ ಸೇನೆಯ ಅರೇಬಿಕ್ ಭಾಷೆಯ ವಕ್ತಾರ ಅವಿಚಾಯ್ ಅಡ್ರೇ ಶನಿವಾರ, ಗಾಝಾ ನಿವಾಸಿಗಳಿಗೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಿಹಾರ ಸಂಸ್ಥೆಗಳು ಕರೀಂ ಅಬೂ ಸಲೀಂ ಅಥವಾ ಕೆರೆಮ್ ಶಾಲೋಮ್ ಮೂಲಕ ಸಾಗಿಸುವ ಟೆಂಟ್‌ಗಳು ಮತ್ತು ಇತರ ಆಶ್ರಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜನರ ಸ್ಥಳಾಂತರ ಯೋಜನೆಯ ಬಗ್ಗೆ ಅಥವಾ ಮಾನವೀಯ ನೆರವು ನೀಡುವಲ್ಲಿ ಅದರ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಉಳಿದಿರುವ ಎರಡು ಹಮಾಸ್ ಭದ್ರಕೋಟೆಗಳಾದ ಉತ್ತರದಲ್ಲಿ ಗಾಝಾ ನಗರ ಮತ್ತು ದಕ್ಷಿಣಕ್ಕೆ ಅಲ್-ಮವಾಸಿಯನ್ನು ‘ಕೆಡವಲು’ ಸೇನೆಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಘೋಷಿಸಿದ ಕೆಲ ದಿನಗಳಲ್ಲೇ ಜನರ ಬಲವಂತದ ಸ್ಥಳಾಂತರಕ್ಕೆ ಇಸ್ರೇಲ್ ಸೇನೆ ಮುಂದಾಗಿದೆ.

ಗಾಝಾ ನಗರದ ಜನಸಂಖ್ಯೆ ಪ್ರಸ್ತುತ ಸುಮಾರು ಒಂದು ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಷ್ಟೂ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆಯೇ?..ದಕ್ಷಿಣ ಗಾಝಾದಲ್ಲಿ ಅವರನ್ನು ಸ್ಥಳಾಂತರಿಸುವ ಪ್ರದೇಶ ಯಾವುದು? ಈಜಿಪ್ಟ್‌ ಗಡಿಯ ಸಮೀಪವಿರುವ ರಫಾ ಪ್ರದೇಶವೇ? ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿಲ್ಲ.

ಜನರನ್ನು ಬಲವಂತವಾಗಿ ಸ್ಥಳಾಂತರಿಸಲು ಮುಂದಾಗಿರುವ ಇಸ್ರೇಲ್‌ನ ಯೋಜನೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕಳೆದ ಗುರುವಾರ ಈ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆ, ಇಸ್ರೇಲ್ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಿದರೆ, ದಕ್ಷಿಣ ಗಾಝಾದಲ್ಲಿ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಲಿದೆ ಎಂದು ಎಚ್ಚರಿಸಿದೆ.

ಹಮಾಸ್‌ನ ಮಿತ್ರ ಸಂಘಟನೆಯಾದ ‘ಇಸ್ಲಾಮಿಕ್ ಜಿಹಾದ್’ ಇಸ್ರೇಲ್ ಸೇನೆಯ ಘೋಷಣೆಯನ್ನು “ಗಾಝಾ ನಗರವನ್ನು ಆಕ್ರಮಿಸಿಕೊಳ್ಳುವ ಕ್ರೂರ ದಾಳಿಯ ಭಾಗ ಮತ್ತು ಅಂತಾರಾಷ್ಟ್ರೀಯ ಸಂಪ್ರದಾಯಗಳ ಸ್ಪಷ್ಟ ಮತ್ತು ನಿರ್ಲಜ್ಜ ಅಪಹಾಸ್ಯ” ಎಂದು ಬಣ್ಣಿಸಿದೆ.

“ಹಸಿವು, ಹತ್ಯಾಕಾಂಡ ನಡುವೆ ಜನರು ಪಲಾಯನ ಮಾಡುವಂತೆ ಒತ್ತಾಯಿಸುವುದು ಮಾನವೀಯತೆಯ ವಿರುದ್ಧ ನಡೆಯುತ್ತಿರುವ ಅಪರಾಧವಾಗಿದೆ. ಗಾಝಾದಲ್ಲಿ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದೈನಂದಿನ ನಡೆಯುತ್ತಿರುವ ಆಕ್ರಮಣ ಒಂದೇ ರೀತಿಯದ್ದು ಎಂದು ಇಸ್ಲಾಮಿಕ್ ಜಿಹಾದ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಿಂದ ಸಾವಿಗೀಡಾದವರ ಅಂದಾಜು ಸಂಖ್ಯೆ 61,827ಕ್ಕೆ ಏರಿಕೆಯಾಗಿದ್ದು, ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಸಿವು, ಅಪೌಷ್ಟಿಕತೆಯಿಂದ ಇದುವರೆಗೆ 251 ಜನರು ಸಾವನ್ನಪ್ಪಿದ್ದಾರೆ.

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...