Homeಅಂತರಾಷ್ಟ್ರೀಯಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

ಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

- Advertisement -
- Advertisement -

ಗಾಝಾ ನಗರವನ್ನು ತನ್ನ ವಶಕ್ಕೆ ಪಡೆಯಲು ಇಸ್ರೇಲ್ ಮುಂದಾಗಿದ್ದು, ಇದರ ಆರಂಭಿಕ ಹಂತವಾಗಿ ಪ್ಯಾಲೆಸ್ತೀನಿಯರನ್ನು ಯುದ್ದ ವಲಯಗಳಿಂದ (ತಮ್ಮ ಸ್ವಂತ ಊರುಗಳಿಂದ) ದಕ್ಷಿಣ ಗಾಝಾಗೆ ಬಲವಂತವಾಗಿ ಸ್ಥಳಾಂತರಿಸುವ ಸಿದ್ದತೆಯನ್ನು ಭಾನುವಾರ (ಆ.17) ಪ್ರಾರಂಭಿಸಿದೆ.

ಇಸ್ರೇಲ್ ಸೇನೆಯ ಅರೇಬಿಕ್ ಭಾಷೆಯ ವಕ್ತಾರ ಅವಿಚಾಯ್ ಅಡ್ರೇ ಶನಿವಾರ, ಗಾಝಾ ನಿವಾಸಿಗಳಿಗೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಿಹಾರ ಸಂಸ್ಥೆಗಳು ಕರೀಂ ಅಬೂ ಸಲೀಂ ಅಥವಾ ಕೆರೆಮ್ ಶಾಲೋಮ್ ಮೂಲಕ ಸಾಗಿಸುವ ಟೆಂಟ್‌ಗಳು ಮತ್ತು ಇತರ ಆಶ್ರಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜನರ ಸ್ಥಳಾಂತರ ಯೋಜನೆಯ ಬಗ್ಗೆ ಅಥವಾ ಮಾನವೀಯ ನೆರವು ನೀಡುವಲ್ಲಿ ಅದರ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಉಳಿದಿರುವ ಎರಡು ಹಮಾಸ್ ಭದ್ರಕೋಟೆಗಳಾದ ಉತ್ತರದಲ್ಲಿ ಗಾಝಾ ನಗರ ಮತ್ತು ದಕ್ಷಿಣಕ್ಕೆ ಅಲ್-ಮವಾಸಿಯನ್ನು ‘ಕೆಡವಲು’ ಸೇನೆಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಘೋಷಿಸಿದ ಕೆಲ ದಿನಗಳಲ್ಲೇ ಜನರ ಬಲವಂತದ ಸ್ಥಳಾಂತರಕ್ಕೆ ಇಸ್ರೇಲ್ ಸೇನೆ ಮುಂದಾಗಿದೆ.

ಗಾಝಾ ನಗರದ ಜನಸಂಖ್ಯೆ ಪ್ರಸ್ತುತ ಸುಮಾರು ಒಂದು ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಷ್ಟೂ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆಯೇ?..ದಕ್ಷಿಣ ಗಾಝಾದಲ್ಲಿ ಅವರನ್ನು ಸ್ಥಳಾಂತರಿಸುವ ಪ್ರದೇಶ ಯಾವುದು? ಈಜಿಪ್ಟ್‌ ಗಡಿಯ ಸಮೀಪವಿರುವ ರಫಾ ಪ್ರದೇಶವೇ? ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿಲ್ಲ.

ಜನರನ್ನು ಬಲವಂತವಾಗಿ ಸ್ಥಳಾಂತರಿಸಲು ಮುಂದಾಗಿರುವ ಇಸ್ರೇಲ್‌ನ ಯೋಜನೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕಳೆದ ಗುರುವಾರ ಈ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆ, ಇಸ್ರೇಲ್ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಿದರೆ, ದಕ್ಷಿಣ ಗಾಝಾದಲ್ಲಿ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಲಿದೆ ಎಂದು ಎಚ್ಚರಿಸಿದೆ.

ಹಮಾಸ್‌ನ ಮಿತ್ರ ಸಂಘಟನೆಯಾದ ‘ಇಸ್ಲಾಮಿಕ್ ಜಿಹಾದ್’ ಇಸ್ರೇಲ್ ಸೇನೆಯ ಘೋಷಣೆಯನ್ನು “ಗಾಝಾ ನಗರವನ್ನು ಆಕ್ರಮಿಸಿಕೊಳ್ಳುವ ಕ್ರೂರ ದಾಳಿಯ ಭಾಗ ಮತ್ತು ಅಂತಾರಾಷ್ಟ್ರೀಯ ಸಂಪ್ರದಾಯಗಳ ಸ್ಪಷ್ಟ ಮತ್ತು ನಿರ್ಲಜ್ಜ ಅಪಹಾಸ್ಯ” ಎಂದು ಬಣ್ಣಿಸಿದೆ.

“ಹಸಿವು, ಹತ್ಯಾಕಾಂಡ ನಡುವೆ ಜನರು ಪಲಾಯನ ಮಾಡುವಂತೆ ಒತ್ತಾಯಿಸುವುದು ಮಾನವೀಯತೆಯ ವಿರುದ್ಧ ನಡೆಯುತ್ತಿರುವ ಅಪರಾಧವಾಗಿದೆ. ಗಾಝಾದಲ್ಲಿ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದೈನಂದಿನ ನಡೆಯುತ್ತಿರುವ ಆಕ್ರಮಣ ಒಂದೇ ರೀತಿಯದ್ದು ಎಂದು ಇಸ್ಲಾಮಿಕ್ ಜಿಹಾದ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಿಂದ ಸಾವಿಗೀಡಾದವರ ಅಂದಾಜು ಸಂಖ್ಯೆ 61,827ಕ್ಕೆ ಏರಿಕೆಯಾಗಿದ್ದು, ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಸಿವು, ಅಪೌಷ್ಟಿಕತೆಯಿಂದ ಇದುವರೆಗೆ 251 ಜನರು ಸಾವನ್ನಪ್ಪಿದ್ದಾರೆ.

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...