Homeಅಂತರಾಷ್ಟ್ರೀಯಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

ಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

- Advertisement -
- Advertisement -

ಗಾಝಾ ನಗರವನ್ನು ತನ್ನ ವಶಕ್ಕೆ ಪಡೆಯಲು ಇಸ್ರೇಲ್ ಮುಂದಾಗಿದ್ದು, ಇದರ ಆರಂಭಿಕ ಹಂತವಾಗಿ ಪ್ಯಾಲೆಸ್ತೀನಿಯರನ್ನು ಯುದ್ದ ವಲಯಗಳಿಂದ (ತಮ್ಮ ಸ್ವಂತ ಊರುಗಳಿಂದ) ದಕ್ಷಿಣ ಗಾಝಾಗೆ ಬಲವಂತವಾಗಿ ಸ್ಥಳಾಂತರಿಸುವ ಸಿದ್ದತೆಯನ್ನು ಭಾನುವಾರ (ಆ.17) ಪ್ರಾರಂಭಿಸಿದೆ.

ಇಸ್ರೇಲ್ ಸೇನೆಯ ಅರೇಬಿಕ್ ಭಾಷೆಯ ವಕ್ತಾರ ಅವಿಚಾಯ್ ಅಡ್ರೇ ಶನಿವಾರ, ಗಾಝಾ ನಿವಾಸಿಗಳಿಗೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಿಹಾರ ಸಂಸ್ಥೆಗಳು ಕರೀಂ ಅಬೂ ಸಲೀಂ ಅಥವಾ ಕೆರೆಮ್ ಶಾಲೋಮ್ ಮೂಲಕ ಸಾಗಿಸುವ ಟೆಂಟ್‌ಗಳು ಮತ್ತು ಇತರ ಆಶ್ರಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜನರ ಸ್ಥಳಾಂತರ ಯೋಜನೆಯ ಬಗ್ಗೆ ಅಥವಾ ಮಾನವೀಯ ನೆರವು ನೀಡುವಲ್ಲಿ ಅದರ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಉಳಿದಿರುವ ಎರಡು ಹಮಾಸ್ ಭದ್ರಕೋಟೆಗಳಾದ ಉತ್ತರದಲ್ಲಿ ಗಾಝಾ ನಗರ ಮತ್ತು ದಕ್ಷಿಣಕ್ಕೆ ಅಲ್-ಮವಾಸಿಯನ್ನು ‘ಕೆಡವಲು’ ಸೇನೆಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಘೋಷಿಸಿದ ಕೆಲ ದಿನಗಳಲ್ಲೇ ಜನರ ಬಲವಂತದ ಸ್ಥಳಾಂತರಕ್ಕೆ ಇಸ್ರೇಲ್ ಸೇನೆ ಮುಂದಾಗಿದೆ.

ಗಾಝಾ ನಗರದ ಜನಸಂಖ್ಯೆ ಪ್ರಸ್ತುತ ಸುಮಾರು ಒಂದು ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಷ್ಟೂ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆಯೇ?..ದಕ್ಷಿಣ ಗಾಝಾದಲ್ಲಿ ಅವರನ್ನು ಸ್ಥಳಾಂತರಿಸುವ ಪ್ರದೇಶ ಯಾವುದು? ಈಜಿಪ್ಟ್‌ ಗಡಿಯ ಸಮೀಪವಿರುವ ರಫಾ ಪ್ರದೇಶವೇ? ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿಲ್ಲ.

ಜನರನ್ನು ಬಲವಂತವಾಗಿ ಸ್ಥಳಾಂತರಿಸಲು ಮುಂದಾಗಿರುವ ಇಸ್ರೇಲ್‌ನ ಯೋಜನೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕಳೆದ ಗುರುವಾರ ಈ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆ, ಇಸ್ರೇಲ್ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಿದರೆ, ದಕ್ಷಿಣ ಗಾಝಾದಲ್ಲಿ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಲಿದೆ ಎಂದು ಎಚ್ಚರಿಸಿದೆ.

ಹಮಾಸ್‌ನ ಮಿತ್ರ ಸಂಘಟನೆಯಾದ ‘ಇಸ್ಲಾಮಿಕ್ ಜಿಹಾದ್’ ಇಸ್ರೇಲ್ ಸೇನೆಯ ಘೋಷಣೆಯನ್ನು “ಗಾಝಾ ನಗರವನ್ನು ಆಕ್ರಮಿಸಿಕೊಳ್ಳುವ ಕ್ರೂರ ದಾಳಿಯ ಭಾಗ ಮತ್ತು ಅಂತಾರಾಷ್ಟ್ರೀಯ ಸಂಪ್ರದಾಯಗಳ ಸ್ಪಷ್ಟ ಮತ್ತು ನಿರ್ಲಜ್ಜ ಅಪಹಾಸ್ಯ” ಎಂದು ಬಣ್ಣಿಸಿದೆ.

“ಹಸಿವು, ಹತ್ಯಾಕಾಂಡ ನಡುವೆ ಜನರು ಪಲಾಯನ ಮಾಡುವಂತೆ ಒತ್ತಾಯಿಸುವುದು ಮಾನವೀಯತೆಯ ವಿರುದ್ಧ ನಡೆಯುತ್ತಿರುವ ಅಪರಾಧವಾಗಿದೆ. ಗಾಝಾದಲ್ಲಿ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದೈನಂದಿನ ನಡೆಯುತ್ತಿರುವ ಆಕ್ರಮಣ ಒಂದೇ ರೀತಿಯದ್ದು ಎಂದು ಇಸ್ಲಾಮಿಕ್ ಜಿಹಾದ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಿಂದ ಸಾವಿಗೀಡಾದವರ ಅಂದಾಜು ಸಂಖ್ಯೆ 61,827ಕ್ಕೆ ಏರಿಕೆಯಾಗಿದ್ದು, ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಸಿವು, ಅಪೌಷ್ಟಿಕತೆಯಿಂದ ಇದುವರೆಗೆ 251 ಜನರು ಸಾವನ್ನಪ್ಪಿದ್ದಾರೆ.

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...