Homeಅಂತರಾಷ್ಟ್ರೀಯರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

ರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

- Advertisement -
- Advertisement -

ದಕ್ಷಿಣ ಗಾಝಾದಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿ  ಹೃದಯವಿದ್ರಾಹಕವಾದುದು ಮತ್ತು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇಸ್ರೇಲ್‌ ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ರಫಾ ನಗರಕ್ಕೆ ಸ್ಥಳಾಂತರಗೊಂಡ ಪ್ಯಾಲೆಸ್ತೀನ್‌ ನಾಗರಿಕರ ಶಿಬಿರದ ಮೇಲೆ ಮೇ.26ರಂದು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಕನಿಷ್ಠ 45 ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇಸ್ರೇಲ್ ಗಾಝಾದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ರಫಾವನ್ನು ಗಾಝಾದಲ್ಲಿನ ಪ್ಯಾಲೆಸ್ತೀನ್‌ ನಾಗರಿಕರ ಕೊನೆಯ ಆಶ್ರಯವೆಂದು ಪರಿಗಣಿಸಲಾಗಿತ್ತು. ರಾಫಾದಲ್ಲಿನ ಶಿಬಿರದಲ್ಲಿ ನಾಗರಿಕರು ಜೀವಗಳನ್ನು ಕಳೆದುಕೊಂಡಿರುವುದು ನಮಗೆ ಆಳವಾದ ಕಳವಳದ ವಿಷಯವಾಗಿದೆ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ನಾಗರಿಕರ ರಕ್ಷಣೆ ಮತ್ತು ನಡೆಯುತ್ತಿರುವ ಸಂಘರ್ಷದಲ್ಲಿ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಗೌರವಿಸಲು ನಾವು ನಿರಂತರವಾಗಿ ಕರೆ ನೀಡಿದ್ದೇವೆ. ಭಾರತವು ಯಾವಾಗಲೂ ಎರಡು ದೇಶಗಳ ಪರಿಹಾರವನ್ನು ಬೆಂಬಲಿಸುತ್ತದೆ ಹಾಗೂ ಸಾರ್ವಭೌಮ ಮತ್ತು ಸ್ವತಂತ್ರ ಫೆಲೆಸ್ತೀನ್‌ ಸ್ಥಾಪನೆಗೆ ಬೆಂಬಲಿಸಿದೆ ಎಂದು ಹೇಳಿದ್ದಾರೆ.

ಮಂಗಳವಾರ, ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಔಪಚಾರಿಕವಾಗಿ ಪ್ಯಾಲೆಸ್ತೀನ್‌ನ್ನು ಒಂದು ದೇಶವೆಂದು ಗುರುತಿಸಿವೆ. ಭಾನುವಾರದ ದಾಳಿಯ ಬಗ್ಗೆ ಜಾಗತಿಕ ಆಕ್ರೋಶದ ಹೊರತಾಗಿಯೂ, ಇಸ್ರೇಲ್ ಗಾಝಾದಲ್ಲಿ ತನ್ನ ಹತ್ಯಾಕಾಂಡವನ್ನು ಮುಂದುವರಿಸಿದೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

ಗಾಝಾದ ಮೇಲೆ ಕಳೆದ 8 ತಿಂಗಳಿನಿಂದ ಇಸ್ರೇಲ್‌ ದಾಳಿಯನ್ನು ನಡೆಸುತ್ತಿದೆ.  ಅಲ್ ಜಝೀರಾ ವರದಿಯ ಪ್ರಕಾರ, ಹಮಾಸ್‌ ಒತ್ತೆಯಾಳುಗಳಲ್ಲಿ ನೂರು ಮಂದಿ ಇನ್ನು ಕೂಡ ಜೀವಂತವಾಗಿದ್ದಾರೆ ಮತ್ತು ಗಾಝಾದಲ್ಲಿದ್ದಾರೆ. ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಕೆಲವು ಒತ್ತೆಯಾಳುಗಳನ್ನು ನವೆಂಬರ್‌ನಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಇತರರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾದ ಮೇಲೆ ಅಭೂತಪೂರ್ವ ವಾಯು ಮತ್ತು ಭೂ ಮಾರ್ಗದಲ್ಲಿ ದಾಳಿಯನ್ನು ಪ್ರಾರಂಭಿಸಿದ ಬಳಿಕೆ ಗಾಝಾದಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಕನಿಷ್ಠ 36,700 ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...