Homeಅಂತರಾಷ್ಟ್ರೀಯರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

ರಫಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: ಭಾರತ ಕಳವಳ

- Advertisement -
- Advertisement -

ದಕ್ಷಿಣ ಗಾಝಾದಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿ  ಹೃದಯವಿದ್ರಾಹಕವಾದುದು ಮತ್ತು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇಸ್ರೇಲ್‌ ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ರಫಾ ನಗರಕ್ಕೆ ಸ್ಥಳಾಂತರಗೊಂಡ ಪ್ಯಾಲೆಸ್ತೀನ್‌ ನಾಗರಿಕರ ಶಿಬಿರದ ಮೇಲೆ ಮೇ.26ರಂದು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಕನಿಷ್ಠ 45 ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇಸ್ರೇಲ್ ಗಾಝಾದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ರಫಾವನ್ನು ಗಾಝಾದಲ್ಲಿನ ಪ್ಯಾಲೆಸ್ತೀನ್‌ ನಾಗರಿಕರ ಕೊನೆಯ ಆಶ್ರಯವೆಂದು ಪರಿಗಣಿಸಲಾಗಿತ್ತು. ರಾಫಾದಲ್ಲಿನ ಶಿಬಿರದಲ್ಲಿ ನಾಗರಿಕರು ಜೀವಗಳನ್ನು ಕಳೆದುಕೊಂಡಿರುವುದು ನಮಗೆ ಆಳವಾದ ಕಳವಳದ ವಿಷಯವಾಗಿದೆ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ನಾಗರಿಕರ ರಕ್ಷಣೆ ಮತ್ತು ನಡೆಯುತ್ತಿರುವ ಸಂಘರ್ಷದಲ್ಲಿ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಗೌರವಿಸಲು ನಾವು ನಿರಂತರವಾಗಿ ಕರೆ ನೀಡಿದ್ದೇವೆ. ಭಾರತವು ಯಾವಾಗಲೂ ಎರಡು ದೇಶಗಳ ಪರಿಹಾರವನ್ನು ಬೆಂಬಲಿಸುತ್ತದೆ ಹಾಗೂ ಸಾರ್ವಭೌಮ ಮತ್ತು ಸ್ವತಂತ್ರ ಫೆಲೆಸ್ತೀನ್‌ ಸ್ಥಾಪನೆಗೆ ಬೆಂಬಲಿಸಿದೆ ಎಂದು ಹೇಳಿದ್ದಾರೆ.

ಮಂಗಳವಾರ, ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಔಪಚಾರಿಕವಾಗಿ ಪ್ಯಾಲೆಸ್ತೀನ್‌ನ್ನು ಒಂದು ದೇಶವೆಂದು ಗುರುತಿಸಿವೆ. ಭಾನುವಾರದ ದಾಳಿಯ ಬಗ್ಗೆ ಜಾಗತಿಕ ಆಕ್ರೋಶದ ಹೊರತಾಗಿಯೂ, ಇಸ್ರೇಲ್ ಗಾಝಾದಲ್ಲಿ ತನ್ನ ಹತ್ಯಾಕಾಂಡವನ್ನು ಮುಂದುವರಿಸಿದೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

ಗಾಝಾದ ಮೇಲೆ ಕಳೆದ 8 ತಿಂಗಳಿನಿಂದ ಇಸ್ರೇಲ್‌ ದಾಳಿಯನ್ನು ನಡೆಸುತ್ತಿದೆ.  ಅಲ್ ಜಝೀರಾ ವರದಿಯ ಪ್ರಕಾರ, ಹಮಾಸ್‌ ಒತ್ತೆಯಾಳುಗಳಲ್ಲಿ ನೂರು ಮಂದಿ ಇನ್ನು ಕೂಡ ಜೀವಂತವಾಗಿದ್ದಾರೆ ಮತ್ತು ಗಾಝಾದಲ್ಲಿದ್ದಾರೆ. ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಕೆಲವು ಒತ್ತೆಯಾಳುಗಳನ್ನು ನವೆಂಬರ್‌ನಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಇತರರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾದ ಮೇಲೆ ಅಭೂತಪೂರ್ವ ವಾಯು ಮತ್ತು ಭೂ ಮಾರ್ಗದಲ್ಲಿ ದಾಳಿಯನ್ನು ಪ್ರಾರಂಭಿಸಿದ ಬಳಿಕೆ ಗಾಝಾದಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಕನಿಷ್ಠ 36,700 ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...