Homeಮುಖಪುಟನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

- Advertisement -
- Advertisement -

ಗಾಜಾದಲ್ಲಿನ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು ಕನಿಷ್ಠ 195 ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ, 120 ಜನ ನಾಪತ್ತೆಯಾಗಿದ್ದಾರೆ, ಅಲ್ಲದೆ 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಸರ್ಕಾರ ಹೇಳಿದೆ ಎಂದು ಗಾಜಾದಲ್ಲಿನ ಮಾಧ್ಯಮ ವರದಿ
ತಿಳಿಸಿದೆ.

ಗಾಜಾ ನಗರದ ಜಬಾಲಿಯಾದಲ್ಲಿದ್ದ ಬಹುದೊಡ್ಡ ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್‌ ರಕ್ಷಣಾ ಪಡೆ (ಐಡಿಎಫ್‌) ಕ್ಷಿಪಣಿ ಹಾಗೂ ಬಾಂಬ್‌ ದಾಳಿ ನಡೆಸಿದೆ. ಇಸ್ರೇಲ್‌ ವಾಯುಸೇನೆ ನಡೆಸಿದ ಭೀಕರ ವಾಯುದಾಳಿಯಲ್ಲಿ 195 ಪ್ಯಾಲೇಸ್ತೀನಿಯರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಮಾಹಿತಿ ನೀಡಿದ ಹಮಾಸ್‌ ಆಡಳಿತ ವಕ್ತಾರ ಹಝೀಮ್‌ ಖಾಸಿಮ್‌, ”ಇಸ್ರೇಲ್‌ ವಾಯು ದಾಳಿಯಿಂದ ವೈದ್ಯಕೀಯ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಆಸ್ಪತ್ರೆಗಳ ಕಟ್ಟಡದ ಹೊರಭಾಗದಲ್ಲೇ ತಾತ್ಕಾಲಿಕ ಆಪರೇಷನ್‌ ಥಿಯೇಟರ್‌ ರಚಿಸಲಾಗಿದೆ. ಔಷಧಿಗಳ ಕೊರತೆ, ವಿದ್ಯುತ್‌ ಸಂಪರ್ಕ ಕಡಿತ, ನೀರಿನ ಸೌಲಭ್ಯ ಇಲ್ಲದೆ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ತಿಳಿಸಿದ್ದಾರೆ.

ಭೀಕರ ದಾಳಿಯಿಂದ ಸಂವಹನ ಸಂಪರ್ಕ ವ್ಯವಸ್ಥೆ ಪೂರ್ಣ ನಾಶವಾಗಿದೆ. ಮೊಬೈಲ್‌, ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗಾಜಾ ಆರೋಗ್ಯ ಇಲಾಖೆ ತಿಳಿಸಿದೆ.

ಹಮಾಸ್‌ ಸಶಸ್ತ್ರ ಗುಂಪಿನ ವಿರುದ್ಧ ದಾಳಿ ನಡೆಸುವ ಭರದಲ್ಲಿ ಪ್ಯಾಲೇಸ್ತೀನಿ ನಾಗರಿಕರನ್ನು ಹತ್ಯೆ ಮಾಡುತ್ತಿರುವ ಇಸ್ರೇಲ್‌ ವಿರುದ್ಧ ಜಾಗತಿಕ ಮಟ್ಟದಲ್ಲಿ ವಿರೋಧ ಹೆಚ್ಚುತ್ತಿದೆ. ಜನರ ಮೇಲೆ ನಡೆಸುತ್ತಿರುವ ದಾಳಿ ನಿಲ್ಲಿಸದಿದ್ದರೆ ಇಸ್ರೇಲ್‌ ವಿರುದ್ಧ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೌತಿ ಸೇನಾ ವಕ್ತಾರ ಯಾಯ್ಯಾ ಸಾರೀ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಪ್ಯಾಲೆಸ್ತೀನಿಯರ ವಿಚಾರದಲ್ಲಿ ಅಮಾನವೀಯವಾಗಿ ವರ್ತಿಸುತ್ತಿರುವ ಇಸ್ರೇಲ್‌ ಜತೆ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವುದಾಗಿ ಹಲವು ದೇಶಗಳು ಘೋಷಣೆ ಮಾಡಿವೆ. ಬೊಲಿವಿಯಾ, ಕೊಲಂಬಿಯಾ, ಚಿಲಿ ಮೊದಲಾದ ದೇಶಗಳು ಇಸ್ರೇಲ್‌ನಲ್ಲಿದ್ದ ರಾಯಭಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ.

ಇಸ್ರೇಲ್-ಹಮಾಸ್ ಯುದ್ಧ ಶುರುವಾದ ನಂತರದಲ್ಲಿ, ಗಾಜಾ ಪಟ್ಟಿಯಲ್ಲಿ ಇರುವ ವಿದೇಶಿ ಪ್ರಜೆಗಳಿಗೆ ಆ ಪ್ರದೇಶವನ್ನು ತೊರೆಯಲು ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಗುರುವಾರವೂ ನೂರಾರು ವಿದೇಶಿಗರ ಸ್ಥಳಾಂತರಕ್ಕಾಗಿ ರಫಾ ಗಡಿಯನ್ನು ತೆರೆಯಲಾಗಿದೆ.

ಆಸ್ಟ್ರೇಲಿಯಾ, ಆಸ್ಟ್ರೀಯಾ, ಬಲ್ಲೇರಿಯಾ, ಫಿನ್‌ಲೆಂಡ್, ಇಂಡೊನೇಷ್ಯಾ, ಜಪಾನ್, ಜೋರ್ಡಾನ್ ಸೇರಿದಂತೆ ಹಲವು ದೇಶಗಳ ಪಾಸ್‌ಪೋರ್ಟ್ ಹೊಂದಿರುವವರು ಗಾಜಾದಿಂದ ಸ್ಥಳಾಂತರಗೊಳ್ಳುತ್ತಿದ್ದಾರೆ.

ಯುದ್ಧ ಶುರುವಾದ ನಂತರದಲ್ಲಿ ಗಾಜಾ ಪಟ್ಟಿಯಲ್ಲಿ 8,525ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ. ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ 122ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಸತ್ತಿದ್ದಾರೆ. ಇಸ್ರೇಲ್‌ನಲ್ಲಿ ಒಟ್ಟು 1,400ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ ಶ್ಲಾಘಿಸಿದ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...