Homeಮುಖಪುಟನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

- Advertisement -
- Advertisement -

ಗಾಜಾದಲ್ಲಿನ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು ಕನಿಷ್ಠ 195 ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ, 120 ಜನ ನಾಪತ್ತೆಯಾಗಿದ್ದಾರೆ, ಅಲ್ಲದೆ 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಸರ್ಕಾರ ಹೇಳಿದೆ ಎಂದು ಗಾಜಾದಲ್ಲಿನ ಮಾಧ್ಯಮ ವರದಿ
ತಿಳಿಸಿದೆ.

ಗಾಜಾ ನಗರದ ಜಬಾಲಿಯಾದಲ್ಲಿದ್ದ ಬಹುದೊಡ್ಡ ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್‌ ರಕ್ಷಣಾ ಪಡೆ (ಐಡಿಎಫ್‌) ಕ್ಷಿಪಣಿ ಹಾಗೂ ಬಾಂಬ್‌ ದಾಳಿ ನಡೆಸಿದೆ. ಇಸ್ರೇಲ್‌ ವಾಯುಸೇನೆ ನಡೆಸಿದ ಭೀಕರ ವಾಯುದಾಳಿಯಲ್ಲಿ 195 ಪ್ಯಾಲೇಸ್ತೀನಿಯರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಮಾಹಿತಿ ನೀಡಿದ ಹಮಾಸ್‌ ಆಡಳಿತ ವಕ್ತಾರ ಹಝೀಮ್‌ ಖಾಸಿಮ್‌, ”ಇಸ್ರೇಲ್‌ ವಾಯು ದಾಳಿಯಿಂದ ವೈದ್ಯಕೀಯ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಆಸ್ಪತ್ರೆಗಳ ಕಟ್ಟಡದ ಹೊರಭಾಗದಲ್ಲೇ ತಾತ್ಕಾಲಿಕ ಆಪರೇಷನ್‌ ಥಿಯೇಟರ್‌ ರಚಿಸಲಾಗಿದೆ. ಔಷಧಿಗಳ ಕೊರತೆ, ವಿದ್ಯುತ್‌ ಸಂಪರ್ಕ ಕಡಿತ, ನೀರಿನ ಸೌಲಭ್ಯ ಇಲ್ಲದೆ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ತಿಳಿಸಿದ್ದಾರೆ.

ಭೀಕರ ದಾಳಿಯಿಂದ ಸಂವಹನ ಸಂಪರ್ಕ ವ್ಯವಸ್ಥೆ ಪೂರ್ಣ ನಾಶವಾಗಿದೆ. ಮೊಬೈಲ್‌, ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗಾಜಾ ಆರೋಗ್ಯ ಇಲಾಖೆ ತಿಳಿಸಿದೆ.

ಹಮಾಸ್‌ ಸಶಸ್ತ್ರ ಗುಂಪಿನ ವಿರುದ್ಧ ದಾಳಿ ನಡೆಸುವ ಭರದಲ್ಲಿ ಪ್ಯಾಲೇಸ್ತೀನಿ ನಾಗರಿಕರನ್ನು ಹತ್ಯೆ ಮಾಡುತ್ತಿರುವ ಇಸ್ರೇಲ್‌ ವಿರುದ್ಧ ಜಾಗತಿಕ ಮಟ್ಟದಲ್ಲಿ ವಿರೋಧ ಹೆಚ್ಚುತ್ತಿದೆ. ಜನರ ಮೇಲೆ ನಡೆಸುತ್ತಿರುವ ದಾಳಿ ನಿಲ್ಲಿಸದಿದ್ದರೆ ಇಸ್ರೇಲ್‌ ವಿರುದ್ಧ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೌತಿ ಸೇನಾ ವಕ್ತಾರ ಯಾಯ್ಯಾ ಸಾರೀ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಪ್ಯಾಲೆಸ್ತೀನಿಯರ ವಿಚಾರದಲ್ಲಿ ಅಮಾನವೀಯವಾಗಿ ವರ್ತಿಸುತ್ತಿರುವ ಇಸ್ರೇಲ್‌ ಜತೆ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವುದಾಗಿ ಹಲವು ದೇಶಗಳು ಘೋಷಣೆ ಮಾಡಿವೆ. ಬೊಲಿವಿಯಾ, ಕೊಲಂಬಿಯಾ, ಚಿಲಿ ಮೊದಲಾದ ದೇಶಗಳು ಇಸ್ರೇಲ್‌ನಲ್ಲಿದ್ದ ರಾಯಭಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ.

ಇಸ್ರೇಲ್-ಹಮಾಸ್ ಯುದ್ಧ ಶುರುವಾದ ನಂತರದಲ್ಲಿ, ಗಾಜಾ ಪಟ್ಟಿಯಲ್ಲಿ ಇರುವ ವಿದೇಶಿ ಪ್ರಜೆಗಳಿಗೆ ಆ ಪ್ರದೇಶವನ್ನು ತೊರೆಯಲು ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಗುರುವಾರವೂ ನೂರಾರು ವಿದೇಶಿಗರ ಸ್ಥಳಾಂತರಕ್ಕಾಗಿ ರಫಾ ಗಡಿಯನ್ನು ತೆರೆಯಲಾಗಿದೆ.

ಆಸ್ಟ್ರೇಲಿಯಾ, ಆಸ್ಟ್ರೀಯಾ, ಬಲ್ಲೇರಿಯಾ, ಫಿನ್‌ಲೆಂಡ್, ಇಂಡೊನೇಷ್ಯಾ, ಜಪಾನ್, ಜೋರ್ಡಾನ್ ಸೇರಿದಂತೆ ಹಲವು ದೇಶಗಳ ಪಾಸ್‌ಪೋರ್ಟ್ ಹೊಂದಿರುವವರು ಗಾಜಾದಿಂದ ಸ್ಥಳಾಂತರಗೊಳ್ಳುತ್ತಿದ್ದಾರೆ.

ಯುದ್ಧ ಶುರುವಾದ ನಂತರದಲ್ಲಿ ಗಾಜಾ ಪಟ್ಟಿಯಲ್ಲಿ 8,525ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ. ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ 122ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಸತ್ತಿದ್ದಾರೆ. ಇಸ್ರೇಲ್‌ನಲ್ಲಿ ಒಟ್ಟು 1,400ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ ಶ್ಲಾಘಿಸಿದ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...