Homeಮುಖಪುಟನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 195 ಪ್ಯಾಲೆಸ್ತೀನಿಯರ ಸಾವು

- Advertisement -
- Advertisement -

ಗಾಜಾದಲ್ಲಿನ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು ಕನಿಷ್ಠ 195 ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ, 120 ಜನ ನಾಪತ್ತೆಯಾಗಿದ್ದಾರೆ, ಅಲ್ಲದೆ 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಸರ್ಕಾರ ಹೇಳಿದೆ ಎಂದು ಗಾಜಾದಲ್ಲಿನ ಮಾಧ್ಯಮ ವರದಿ
ತಿಳಿಸಿದೆ.

ಗಾಜಾ ನಗರದ ಜಬಾಲಿಯಾದಲ್ಲಿದ್ದ ಬಹುದೊಡ್ಡ ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್‌ ರಕ್ಷಣಾ ಪಡೆ (ಐಡಿಎಫ್‌) ಕ್ಷಿಪಣಿ ಹಾಗೂ ಬಾಂಬ್‌ ದಾಳಿ ನಡೆಸಿದೆ. ಇಸ್ರೇಲ್‌ ವಾಯುಸೇನೆ ನಡೆಸಿದ ಭೀಕರ ವಾಯುದಾಳಿಯಲ್ಲಿ 195 ಪ್ಯಾಲೇಸ್ತೀನಿಯರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಮಾಹಿತಿ ನೀಡಿದ ಹಮಾಸ್‌ ಆಡಳಿತ ವಕ್ತಾರ ಹಝೀಮ್‌ ಖಾಸಿಮ್‌, ”ಇಸ್ರೇಲ್‌ ವಾಯು ದಾಳಿಯಿಂದ ವೈದ್ಯಕೀಯ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಆಸ್ಪತ್ರೆಗಳ ಕಟ್ಟಡದ ಹೊರಭಾಗದಲ್ಲೇ ತಾತ್ಕಾಲಿಕ ಆಪರೇಷನ್‌ ಥಿಯೇಟರ್‌ ರಚಿಸಲಾಗಿದೆ. ಔಷಧಿಗಳ ಕೊರತೆ, ವಿದ್ಯುತ್‌ ಸಂಪರ್ಕ ಕಡಿತ, ನೀರಿನ ಸೌಲಭ್ಯ ಇಲ್ಲದೆ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ತಿಳಿಸಿದ್ದಾರೆ.

ಭೀಕರ ದಾಳಿಯಿಂದ ಸಂವಹನ ಸಂಪರ್ಕ ವ್ಯವಸ್ಥೆ ಪೂರ್ಣ ನಾಶವಾಗಿದೆ. ಮೊಬೈಲ್‌, ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗಾಜಾ ಆರೋಗ್ಯ ಇಲಾಖೆ ತಿಳಿಸಿದೆ.

ಹಮಾಸ್‌ ಸಶಸ್ತ್ರ ಗುಂಪಿನ ವಿರುದ್ಧ ದಾಳಿ ನಡೆಸುವ ಭರದಲ್ಲಿ ಪ್ಯಾಲೇಸ್ತೀನಿ ನಾಗರಿಕರನ್ನು ಹತ್ಯೆ ಮಾಡುತ್ತಿರುವ ಇಸ್ರೇಲ್‌ ವಿರುದ್ಧ ಜಾಗತಿಕ ಮಟ್ಟದಲ್ಲಿ ವಿರೋಧ ಹೆಚ್ಚುತ್ತಿದೆ. ಜನರ ಮೇಲೆ ನಡೆಸುತ್ತಿರುವ ದಾಳಿ ನಿಲ್ಲಿಸದಿದ್ದರೆ ಇಸ್ರೇಲ್‌ ವಿರುದ್ಧ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೌತಿ ಸೇನಾ ವಕ್ತಾರ ಯಾಯ್ಯಾ ಸಾರೀ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಪ್ಯಾಲೆಸ್ತೀನಿಯರ ವಿಚಾರದಲ್ಲಿ ಅಮಾನವೀಯವಾಗಿ ವರ್ತಿಸುತ್ತಿರುವ ಇಸ್ರೇಲ್‌ ಜತೆ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳುವುದಾಗಿ ಹಲವು ದೇಶಗಳು ಘೋಷಣೆ ಮಾಡಿವೆ. ಬೊಲಿವಿಯಾ, ಕೊಲಂಬಿಯಾ, ಚಿಲಿ ಮೊದಲಾದ ದೇಶಗಳು ಇಸ್ರೇಲ್‌ನಲ್ಲಿದ್ದ ರಾಯಭಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ.

ಇಸ್ರೇಲ್-ಹಮಾಸ್ ಯುದ್ಧ ಶುರುವಾದ ನಂತರದಲ್ಲಿ, ಗಾಜಾ ಪಟ್ಟಿಯಲ್ಲಿ ಇರುವ ವಿದೇಶಿ ಪ್ರಜೆಗಳಿಗೆ ಆ ಪ್ರದೇಶವನ್ನು ತೊರೆಯಲು ಇದೇ ಮೊದಲ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಗುರುವಾರವೂ ನೂರಾರು ವಿದೇಶಿಗರ ಸ್ಥಳಾಂತರಕ್ಕಾಗಿ ರಫಾ ಗಡಿಯನ್ನು ತೆರೆಯಲಾಗಿದೆ.

ಆಸ್ಟ್ರೇಲಿಯಾ, ಆಸ್ಟ್ರೀಯಾ, ಬಲ್ಲೇರಿಯಾ, ಫಿನ್‌ಲೆಂಡ್, ಇಂಡೊನೇಷ್ಯಾ, ಜಪಾನ್, ಜೋರ್ಡಾನ್ ಸೇರಿದಂತೆ ಹಲವು ದೇಶಗಳ ಪಾಸ್‌ಪೋರ್ಟ್ ಹೊಂದಿರುವವರು ಗಾಜಾದಿಂದ ಸ್ಥಳಾಂತರಗೊಳ್ಳುತ್ತಿದ್ದಾರೆ.

ಯುದ್ಧ ಶುರುವಾದ ನಂತರದಲ್ಲಿ ಗಾಜಾ ಪಟ್ಟಿಯಲ್ಲಿ 8,525ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ. ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ 122ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಸತ್ತಿದ್ದಾರೆ. ಇಸ್ರೇಲ್‌ನಲ್ಲಿ ಒಟ್ಟು 1,400ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಹಿಂಸಾಚಾರ ಶ್ಲಾಘಿಸಿದ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...