Homeಮುಖಪುಟಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

- Advertisement -
- Advertisement -

ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಇಸ್ರೇಲಿ ಪಡೆಗಳು 46,788ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದು 110,453 ಜನರನ್ನು ಗಾಯಗೊಳಿಸಿದ 460 ದಿನಗಳಿಗೂ ಹೆಚ್ಚು ಕಾಲದ ಆಕ್ರಮಣದ ನಂತರ ಕದನ ವಿರಾಮಕ್ಕೆ ನೆತನ್ಯಾಹು ಸರ್ಕಾರ ಮುಂದಾಗಿದೆ.

ಆರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಂಪುಟ ಸಭೆಯ ನಂತರ ಇಸ್ರೇಲ್ ಸರ್ಕಾರ ಶನಿವಾರ (ಜ.17) ಬೆಳಗಿನ ಜಾವ ಕದನ ವಿರಾಮ ಒಪ್ಪಂದವನ್ನು ಅಂಗೀಕರಿಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

“ಒತ್ತೆಯಾಳುನ್ನು ಬಿಡುಗಡೆ ಮಾಡುವ ಒಪ್ಪಂದವನ್ನು ಸರ್ಕಾರ ಅನುಮೋದಿಸಿದೆ. ಒತ್ತೆಯಾಳುಗಳ ಬಿಡುಗಡೆ ಕಾರ್ಯ ಭಾನುವಾರದಿಂದ (ಜ.19) ಜಾರಿಗೆ ಬರಲಿದೆ ಎಂದು” ನೆತನ್ಯಾಹು ಕಚೇರಿ ಹೇಳಿದೆ.

ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಸಂಪುಟದ ಕೆಲವರು ತೀವ್ರವಾಗಿ ವಿರೋಧಿಸಿದರು. ಆದರೂ, ನೆತನ್ಯಾಹು ನೇತೃತ್ವದ ಸಮ್ಮಿಶ್ರ ಸರ್ಕಾರದ 24 ಮಂದಿ ಸಚಿವರು ಒಪ್ಪಂದದ ಪರ ಮತ ಚಲಾಯಿಸಿದ್ದಾರೆ. ಎಂಟು ಮಂದಿ ವಿರುದ್ದ ಮತ ಹಾಕಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇಸ್ರೇಲಿ ಭದ್ರತಾ ಸಂಪುಟವು ಶುಕ್ರವಾರ (ಜ.16) ಕದನ ವಿರಾಮ ಒಪ್ಪಂದದ ಪರವಾಗಿ ಮತ ಚಲಾಯಿಸಿದೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಗಾಝಾದಲ್ಲಿ ಒತ್ತೆಯಾಳುಗಳಾಗಿರುವ ಕೆಲವು ಇಸ್ರೇಲ್ ನಾಗರಿಕರನ್ನು ಹಮಾಸ್ ಬಿಡುಗಡೆ ಮಾಡಲಿದೆ. ಇಸ್ರೇಲ್ ಕೂಡ ಗಾಝಾದಿಂದ ಬಂಧಿಸಿ ಕರೆದೊಯ್ದಿರುವ ಕೆಲ ಪ್ಯಾಲೆಸ್ತೀನ್ ನಾಗರಿಕರನ್ನು ಬಿಡುಗಡೆ ಮಾಡಲಿದೆ.

ಮೊದಲ ಹಂತ ಯಶಸ್ವಿಯಾದರೆ, ಹಮಾಸ್ ಇನ್ನಷ್ಟು ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ.

ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಹಂತವಾಗಿ ಇಸ್ರೇಲ್ ಸೇನೆಯು ಸಂಪೂರ್ಣವಾಗಿ ಯುದ್ಧ ನಿಲ್ಲಿಸಿ ಗಾಝಾ ಪ್ರದೇಶದಿಂದ ಹಿಂದಿರುಗಲಿದೆ. ಉತ್ತರ ಗಾಝಾದ ನಾಗರಿಕರು ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ವಾಪಾಸಾಗಲಿದ್ದಾರೆ. ಮಾನವೀಯ ನೆರವು ಹೆಚ್ಚಾಗಲಿದೆ ಮತ್ತು ಗಾಝಾದ ಮರು ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಲಿದೆ.

ವರದಿಗಳ ಪ್ರಕಾರ, ಇಸ್ರೇಲ್ ಸಚಿವ ಸಂಪುಟ ಕದನ ವಿರಾಮ ಒಪ್ಪಂದಕ್ಕೆ ಅನುಮೋದನೆ ನೀಡಿದ ಬಳಿಕ, ಒಪ್ಪಂದದ ಮೊದಲ ಹಂತವಾಗಿ ಬಿಡುಗಡೆ ಮಾಡಲಿರುವ 737 ಪ್ಯಾಲೆಸ್ತೀನಿಯರ ಪಟ್ಟಿ ಪ್ರಕಟಿಸಿದೆ. ಆ ಪಟ್ಟಿಯಂತೆ ಭಾರತೀಯ ಕಾಲಮಾನ ಭಾನುವಾರ ಸಂಜೆ 4 ಗಂಟೆಗೆ (14:00 GMT)ಬಂಧಿತರು ಬಿಡುಗಡೆಯಾಗಲಿದ್ದಾರೆ.

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...