Homeಅಂತರಾಷ್ಟ್ರೀಯಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

ಸಂಪೂರ್ಣ ಗಾಝಾ ವಶಕ್ಕೆ ಪಡೆಯುವ ಯೋಜನೆಗೆ ಇಸ್ರೇಲ್ ಸಂಪುಟ ಅನುಮೋದನೆ: ವರದಿ

- Advertisement -
- Advertisement -

ಸಂಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ ಮತ್ತು ಅನಿರ್ದಿಷ್ಟ ಸಮಯದವರೆಗೆ ಆ ಪ್ರದೇಶದಲ್ಲಿ ಉಳಿಯುವ ಯೋಜನೆಗೆ ಇಸ್ರೇಲ್ ಸಚಿವ ಸಂಪುಟ ಸೋಮವಾರ (ಮೇ.5) ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಯೋಜನೆಯಂತೆ ಇಸ್ರೇಲ್ ಮುಂದುವರಿದರೆ ಗಾಝಾದ ಮೇಲಿನ ಆಕ್ರಮಣ ಇನ್ನಷ್ಟು ಹೆಚ್ಚಾಗಬಹುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಸ್ರೇಲ್ ತೀವ್ರ ವಿರೋಧವನ್ನು ಎದುರಿಸಬಹುದು ಎಂದು ವರದಿಗಳು ಹೇಳಿವೆ.

ಸಾವಿರಾರು ಸೈನಿಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥರು ತಿಳಿಸಿದ ಬೆನ್ನಲ್ಲೇ, ಸೋಮವಾರ ಬೆಳಗ್ಗಿನ ಜಾವ ನಡೆದ ಮತದಾನದಲ್ಲಿ ಗಾಝಾವನ್ನು ವಶಕ್ಕೆ ಪಡೆಯುವ ಯೋಜನೆಗೆ ಅನುಮೋದನೆ ಪಡೆಯಲಾಗಿದೆ.

ಹಮಾಸ್ ಅನ್ನು ಸಂಪೂರ್ಣವಾಗಿ ಸೋಲಿಸಿ, ಅದರ ವಶದಲ್ಲಿರುವ ಒತ್ತೆಯಾಳುಗಳನ್ನು ಬಿಡುಗಡೆಗಗೊಳಿಸುವುದು ನಮ್ಮ ಗುರಿ ಎಂದು ಇಸ್ರೇಲ್ ಹೇಳಿಕೊಂಡರೂ, ಅದು ಗಾಝಾವನ್ನು ವಶಕ್ಕೆ ಪಡೆದರೆ ಲಕ್ಷಾಂತರ ಪ್ಯಾಲೆಸ್ತೀನಿಯರು ದಕ್ಷಿಣ ಗಾಝಾದಲ್ಲಿ ಜೀವನ ನಡೆಸಬೇಕಾಗದ ಪರಿಸ್ಥಿತಿ ಉಂಟಾಗಬಹುದು. ಅಲ್ಲಿ ಮಿತಿ ಮೀರಿದ ಜನರಿಂದ ವಿವಿಧ ರೀತಿಯ ಮಾನವೀಯ ಬಿಕ್ಕಟ್ಟುಗಳು ಉಲ್ಬಣಿಸಬಹುದು ಎಂದು ವರದಿಗಳು ಹೇಳಿವೆ.

ಇಸ್ರೇಲ್ ಪ್ರಸ್ತುತ ಶೇಕಡ 50ರಷ್ಟು ಗಾಝಾ ಪ್ರದೇಶವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಸಂಪೂರ್ಣ ಗಾಝಾಗೆ ಆಹಾರ, ಇಂಧನ, ನೀರು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಸರಬರಾಜು ಸ್ಥಗಿತಗೊಳಿಸಿದೆ. ಇದರಿಂದ ಅಲ್ಲಿನ ಜನತೆ ಆಹಾರ, ನೀರು ಸೇರಿದಂತೆ ದಿನಬಳಕೆಯ ವಸ್ತುಗಳು ಸಿಗದೆ ಪರದಾಡುತ್ತಿದ್ದಾರೆ. ಕಳೆದ 19 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ, ಈಗ ಗಾಝಾ ಜನತೆ ದೊಡ್ಡ ಮಟ್ಟದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಗಾಝಾದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಗಾಝಾ ಜನತೆಯನ್ನು ಅವರ ಜನ್ಮ ನಾಡಿನಿಂದ ಹೊರ ಹಾಕಿ ಅದನ್ನು ಇಸ್ರೇಲ್ ಮತ್ತು ಅಮೆರಿಕದ ನಿಯಂತ್ರಣಕ್ಕೆ ಪಡೆಯುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜನೆಯಾಗಿದೆ. ಇದನ್ನು ಇಸ್ರೇಲ್ ಸಂಪೂರ್ಣವಾಗಿ ಬೆಂಬಲಿಸಿದೆ. ಗಾಝಾ ಜನತೆಯನ್ನು ಸುತ್ತಮುತ್ತಲಿನ ರಾಷ್ಟ್ರಗಳಿಗೆ ಬಲವಂತವಾಗಿ ಓಡಿಸುವ ಈ ಯೋಜನೆಯನ್ನು ಇಸ್ರೇಲ್ ‘ಸ್ವಯಂ ಪ್ರೇರಿತ ವಲಸೆ’ ಎಂದಿದೆ. ಆದರೆ, ಯುರೋಪ್ ಮತ್ತು ಅರಬ್ ರಾಷ್ಟ್ರಗಳು ಈ ಯೋಜನೆಯನ್ನು ಬಲವಾಗಿ ವಿರೋಧಿಸಿದೆ.

ಗಾಝಾದ ಭೂಮಿ ಪ್ಯಾಲೆಸ್ತೀನಿಯರಿಗೆ ಸೇರಿದ್ದು, ಅದನ್ನು ಮರು ನಿರ್ಮಾಣ ಮಾಡಿ ಅಲ್ಲಿನ ಜನರಿಗೆ ಅವರದ್ದೇ ನಾಡಿನಲ್ಲಿ ಸ್ವತಂತ್ರವಾಗಿ ಜೀವಿಸಲು ಅನುವು ಮಾಡಿಕೊಡಬೇಕೆಂದು ಅರಬ್ ರಾಷ್ಟ್ರಗಳು ಆಗ್ರಹಿಸಿವೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾದ ನೇತೃತ್ವದಲ್ಲಿ ಎರಡ್ಮೂರು ಸಭೆಗಳನ್ನೂ ನಡೆಸಿವೆ. ಸಂಪೂರ್ಣ ಗಾಝಾ ವಶಪಡಿಸಿಕೊಳ್ಳುವ ಇಸ್ರೇಲ್‌ನ ಯೋಜನೆಗೆ ಅದು ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...