Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...