Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...