Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...