Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...