Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...