Homeಅಂತರಾಷ್ಟ್ರೀಯಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

ಇಸ್ರೇಲ್‌ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಸುರಕ್ಷಿತವಾಗಿರಲ್ಲ: ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್‌

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಕಳೆದ 6 ತಿಂಗಳಿನಿಂದ ಯುದ್ಧವನ್ನು ನಡೆಸುತ್ತಿದೆ. ಈ ಮಧ್ಯೆ ಕಳೆದ ವಾರ ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ವೈಮಾನಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದರು.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ಸಾವನ್ನಪ್ಪಿದ್ದಾರೆ ಎಂದು ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿತ್ತು. ಇಸ್ರೇಲ್‌ನ ಈ ಭಯೋತ್ಪಾದಕ ದಾಳಿಯನ್ನು ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್, ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಸೇರಿ ಹಲವುರು ಖಂಡಿಸಿದ್ದರು. ಇಸ್ರೇಲ್‌ ವಿರುದ್ಧ ಪ್ರತಿಕಾರ ತೀರಿಸುವುದಾಗಿ ಹೇಳಿದ್ದರು.

ಇದೀಗ ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆಯಿಂದ ಆಕ್ರೋಶಗೊಂಡಿರುವ ಇರಾನ್‌, ಇಸ್ರೇಲ್‍ನ ಯಾವುದೇ ರಾಯಭಾರಿ ಕಚೇರಿಗಳು ಇನ್ನು ಮುಂದೆ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮಿಲಿಟರಿ ಸಲಹೆಗಾರ ಜ.ರಹೀಮ್ ಸಫಾವಿ ಈ ಹೇಳಿಕೆಯನ್ನು ನೀಡಿದ್ದು, ನಮಗೆ ಯಾರೆಲ್ಲಾ ಹಾನಿ ಮಾಡುತ್ತಾರೋ ಅಥವಾ ಹಾನಿ ಮಾಡಲು ಪ್ರಯತ್ನಿಸುತ್ತಾರೋ ಅವರಿಗೆ ನಾವು ಹಾನಿ ಮಾಡುತ್ತೇವೆ. ಈ ಸಿದ್ಧಾಂತವನ್ನು ನಾವು ಸದಾಕಾಲ ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಟೆಹ್ರಾನ್‍ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಸಫಾವಿ, ಇರಾನ್‍ನ ರಾಯಭಾರಿ ಕಚೇರಿ ಮೇಲಿನ ದಾಳಿಗೆ ಅದೇ ರೀತಿಯಲ್ಲಿ ಉತ್ತರಿಸುವ ಸೂಚನೆಯನ್ನು ನೀಡಿದ್ದಾರೆ.

ಇರಾನ್‌ ಮೇಲಿನ ದಾಳಿಯಲ್ಲಿ ಇಸ್ರೇಲ್ ನೇರವಾಗಿ ತನ್ನ ಒಳಗೊಳ್ಳುವಿಕೆಯನ್ನು ಒಪ್ಪಿಕೊಂಡಿಲ್ಲ. ಇಸ್ರೇಲ್ ಯಾವುದೇ ಪ್ರತಿಕ್ರಿಯೆಗೆ ಸಿದ್ಧವಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಕಳೆದ 6 ತಿಂಗಳಿನಿಂದ ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿದ್ದ ಇಸ್ರೇಲ್‌, ಗಾಝಾದ ಖಾನ್‍ಯೂನಿಸ್ ನಗರದಿಂದ ತನ್ನ 98ನೇ ಪ್ಯಾರಾಟ್ರೂಪರ್ ಘಟಕವನ್ನು ಹಿಂದಕ್ಕೆ ಕರೆಸಿಕೊಳ್ಳುವುದಾಗಿ ರವಿವಾರ ಘೋಷಿಸಿತ್ತು. ಇರಾನ್‍ ಸಂಭಾವ್ಯ ಪ್ರತಿದಾಳಿ ಹಿನ್ನೆಲೆ ಇಸ್ರೇಲ್ ಈ ಕ್ರಮ ಕೈಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇಸ್ರೇಲ್‌-ಗಾಝಾ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟಾಗಿತ್ತು. ಇದೀಗ ಇಸ್ರೇಲ್‌-ಇರಾನ್‌ ರಾಯಭಾರಿ ಕಚೇರಿ ಮೇಲೆ ನಡೆಸಿದ ದಾಳಿಯು ಈ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ 33,175 ಮಂದಿ ಸಾವನ್ನಪ್ಪಿದ್ದಾರೆ. ಮೃತರದಲ್ಲಿ ಮೂರನೇ ಎರಡರಷ್ಟು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ ಎಂದು ತಿಳಿಸಿದೆ.

ಇದನ್ನು ಓದಿ: ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...