Homeಅಂತರಾಷ್ಟ್ರೀಯಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

ಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

- Advertisement -
- Advertisement -

ಇಸ್ರೇಲ್ ಮೇಲೆ ಹಮಾಸ್‌ ಗುಂಪು ನಡೆಸಿದ ಹಠಾತ್ ರಾಕೆಟ್‌ ದಾಳಿ ಬಳಿಕ ಕಳೆದ 24 ಗಂಟೆಗಳಿಂದ ಇಸ್ರೇಲ್ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ಗುಂಪು ಹಮಾಸ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಉತ್ತರ ಇಸ್ರೇಲ್ ಮೇಲೆ ಲೆಬನಾನ್‌ ಶೆಲ್ ದಾಳಿಯನ್ನು ನಡೆಸಿದೆ. ಲೆಬನಾನಿನ ಹೆಜ್ಬೊಲ್ಲಾಹ್ ಸಂಘಟನೆ ಭಾನುವಾರ ಇಸ್ರೇಲ್ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್ ಲೆಬನಾನ್‌ಗೆ ಫಿರಂಗಿ ದಾಳಿ ನಡೆಸಿದೆ ಮತ್ತು ಗಡಿಯ ಸಮೀಪವಿರುವ ಹೆಜ್ಬೊಲ್ಲಾಹ್ ಪೋಸ್ಟ್‌ನ ಮೇಲೆ ಡ್ರೋನ್ ದಾಳಿ ನಡೆಸಿದೆ.

ಶನಿವಾರ ಬೆಳಗ್ಗೆ ಪ್ಯಾಲೇಸ್ತೀನ್‌ನ ಹಮಾಸ್ ಗುಂಪು ನಡೆಸಿದ ದಾಳಿ ಬಳಿಕ  ಇಸ್ರೇಲ್‌ನಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ  ಆಪರೇಷನ್ ಐರನ್ ಸ್ವೋರ್ಡ್ಸ್, ಇಸ್ರೇಲ್ ರಕ್ಷಣಾ ಪಡೆಗಳ ದಾಳಿಯಲ್ಲಿ ಗಾಜಾದಲ್ಲಿ 313 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಹಮಾಸ್ ಸಶಸ್ತ್ರ ವಿಭಾಗ, ಕಸ್ಸಾಮ್ ಬ್ರಿಗೇಡ್ಸ್, ಇಸ್ರೇಲ್‌ನ ಹಲವಾರು ಪ್ರದೇಶಗಳಲ್ಲಿ  ತೀವ್ರ ಘರ್ಷಣೆಯಲ್ಲಿ ತೊಡಗಿದೆ.

ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್) ತನ್ನ ಸೈನಿಕರು ಇಸ್ರೇಲ್‌ನೊಳಗೆ ಪ್ಯಾಲೇಸ್ತೀನಿ ಗುಂಪು ಹಮಾಸ್‌ನೊಂದಿಗೆ ಇನ್ನೂ ಯುದ್ಧದಲ್ಲಿ ತೊಡಗಿದ್ದಾರೆ ಎಂದು ಹೇಳಿದೆ. ಒಫಾಕಿಮ್, ಸ್ಡೆರೋಟ್, ಯಾದ್ ಮೊರ್ಡೆಚೈ, ಕ್ಫರ್ ಅಜ್ಜಾ, ಬೆಯೆರಿ, ಯತಿದ್ ಮತ್ತು ಕಿಸ್ಸುಫಿಮ್ ಸೇರಿದಂತೆ ಗಾಜಾ ಪಟ್ಟಿಯ ಗಡಿಯಲ್ಲಿರುವ ಇಸ್ರೇಲಿ ಪ್ರದೇಶಗಳಲ್ಲಿ ಹಮಾಸ್ ಜೊತೆ ಕದನ ನಡೆಯುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಉತ್ತರ ಇಸ್ರೇಲ್‌ನ ಗಡಿ ಪ್ರದೇಶಗಳು ಲೆಬನಾನ್‌ನಿಂದ ಶೆಲ್‌ ದಾಳಿಗೆ ಗುರಿಯಾಗಿವೆ. ಲೆಬನಾನಿನ ಹೆಜ್ಬೊಲ್ಲಾಹ್ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇಸ್ರೇಲಿ ಪಡೆಗಳು ಹಿಜ್ಬುಲ್ಲಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳ ಮೂಲಕ ಪ್ರತಿ ದಾಳಿ ನಡೆಸುತ್ತಿದೆ. ದಕ್ಷಿಣ ಇಸ್ರೇಲ್‌ನ ಹಲವು ಭಾಗಗಳಲ್ಲಿ ರಾಕೆಟ್ ಸೈರನ್‌ಗಳು ಸದ್ದು ಮಾಡುತ್ತಲೇ ಇವೆ ಎಂದು ಇಸ್ರೇಲ್‌ ಮಾದ್ಯಮ ವರದಿ ಮಾಡಿದೆ.

ಇಸ್ರೇಲ್‌ ನಡೆಸಿದ ವಾಯುದಾಳಿಯಿಂದ ಗಾಜಾ ನಗರದ ವಟಾನ್ ಟವರ್, ಅಲ್-ಅಕ್ಲೌಕ್ ಟವರ್ ಮತ್ತು ಮಾಟರ್ ವಸತಿ ಕಟ್ಟಡ ಸೇರಿದಂತೆ ಹೆಚ್ಚಿನ ವಸತಿ ಕಟ್ಟಡಗಳು ನೆಲಕ್ಕೆ ಉರುಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್ ಸರ್ಕಾರವು  ಗಾಜಾ ಪಟ್ಟಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಶನಿವಾರ ಗಾಜಾ ಪಟ್ಟಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಇಸ್ರೇಲ್‌ ವಿದ್ಯುತ್ ಕಂಪನಿಗೆ ಆದೇಶ ನೀಡಿರುವುದಾಗಿ ಇಂಧನ ಸಚಿವರು ತಿಳಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...