Homeಅಂತರಾಷ್ಟ್ರೀಯಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

ಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

- Advertisement -
- Advertisement -

ಇಸ್ರೇಲ್ ಮೇಲೆ ಹಮಾಸ್‌ ಗುಂಪು ನಡೆಸಿದ ಹಠಾತ್ ರಾಕೆಟ್‌ ದಾಳಿ ಬಳಿಕ ಕಳೆದ 24 ಗಂಟೆಗಳಿಂದ ಇಸ್ರೇಲ್ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ಗುಂಪು ಹಮಾಸ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಉತ್ತರ ಇಸ್ರೇಲ್ ಮೇಲೆ ಲೆಬನಾನ್‌ ಶೆಲ್ ದಾಳಿಯನ್ನು ನಡೆಸಿದೆ. ಲೆಬನಾನಿನ ಹೆಜ್ಬೊಲ್ಲಾಹ್ ಸಂಘಟನೆ ಭಾನುವಾರ ಇಸ್ರೇಲ್ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್ ಲೆಬನಾನ್‌ಗೆ ಫಿರಂಗಿ ದಾಳಿ ನಡೆಸಿದೆ ಮತ್ತು ಗಡಿಯ ಸಮೀಪವಿರುವ ಹೆಜ್ಬೊಲ್ಲಾಹ್ ಪೋಸ್ಟ್‌ನ ಮೇಲೆ ಡ್ರೋನ್ ದಾಳಿ ನಡೆಸಿದೆ.

ಶನಿವಾರ ಬೆಳಗ್ಗೆ ಪ್ಯಾಲೇಸ್ತೀನ್‌ನ ಹಮಾಸ್ ಗುಂಪು ನಡೆಸಿದ ದಾಳಿ ಬಳಿಕ  ಇಸ್ರೇಲ್‌ನಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ  ಆಪರೇಷನ್ ಐರನ್ ಸ್ವೋರ್ಡ್ಸ್, ಇಸ್ರೇಲ್ ರಕ್ಷಣಾ ಪಡೆಗಳ ದಾಳಿಯಲ್ಲಿ ಗಾಜಾದಲ್ಲಿ 313 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಹಮಾಸ್ ಸಶಸ್ತ್ರ ವಿಭಾಗ, ಕಸ್ಸಾಮ್ ಬ್ರಿಗೇಡ್ಸ್, ಇಸ್ರೇಲ್‌ನ ಹಲವಾರು ಪ್ರದೇಶಗಳಲ್ಲಿ  ತೀವ್ರ ಘರ್ಷಣೆಯಲ್ಲಿ ತೊಡಗಿದೆ.

ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್) ತನ್ನ ಸೈನಿಕರು ಇಸ್ರೇಲ್‌ನೊಳಗೆ ಪ್ಯಾಲೇಸ್ತೀನಿ ಗುಂಪು ಹಮಾಸ್‌ನೊಂದಿಗೆ ಇನ್ನೂ ಯುದ್ಧದಲ್ಲಿ ತೊಡಗಿದ್ದಾರೆ ಎಂದು ಹೇಳಿದೆ. ಒಫಾಕಿಮ್, ಸ್ಡೆರೋಟ್, ಯಾದ್ ಮೊರ್ಡೆಚೈ, ಕ್ಫರ್ ಅಜ್ಜಾ, ಬೆಯೆರಿ, ಯತಿದ್ ಮತ್ತು ಕಿಸ್ಸುಫಿಮ್ ಸೇರಿದಂತೆ ಗಾಜಾ ಪಟ್ಟಿಯ ಗಡಿಯಲ್ಲಿರುವ ಇಸ್ರೇಲಿ ಪ್ರದೇಶಗಳಲ್ಲಿ ಹಮಾಸ್ ಜೊತೆ ಕದನ ನಡೆಯುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಉತ್ತರ ಇಸ್ರೇಲ್‌ನ ಗಡಿ ಪ್ರದೇಶಗಳು ಲೆಬನಾನ್‌ನಿಂದ ಶೆಲ್‌ ದಾಳಿಗೆ ಗುರಿಯಾಗಿವೆ. ಲೆಬನಾನಿನ ಹೆಜ್ಬೊಲ್ಲಾಹ್ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇಸ್ರೇಲಿ ಪಡೆಗಳು ಹಿಜ್ಬುಲ್ಲಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳ ಮೂಲಕ ಪ್ರತಿ ದಾಳಿ ನಡೆಸುತ್ತಿದೆ. ದಕ್ಷಿಣ ಇಸ್ರೇಲ್‌ನ ಹಲವು ಭಾಗಗಳಲ್ಲಿ ರಾಕೆಟ್ ಸೈರನ್‌ಗಳು ಸದ್ದು ಮಾಡುತ್ತಲೇ ಇವೆ ಎಂದು ಇಸ್ರೇಲ್‌ ಮಾದ್ಯಮ ವರದಿ ಮಾಡಿದೆ.

ಇಸ್ರೇಲ್‌ ನಡೆಸಿದ ವಾಯುದಾಳಿಯಿಂದ ಗಾಜಾ ನಗರದ ವಟಾನ್ ಟವರ್, ಅಲ್-ಅಕ್ಲೌಕ್ ಟವರ್ ಮತ್ತು ಮಾಟರ್ ವಸತಿ ಕಟ್ಟಡ ಸೇರಿದಂತೆ ಹೆಚ್ಚಿನ ವಸತಿ ಕಟ್ಟಡಗಳು ನೆಲಕ್ಕೆ ಉರುಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್ ಸರ್ಕಾರವು  ಗಾಜಾ ಪಟ್ಟಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಶನಿವಾರ ಗಾಜಾ ಪಟ್ಟಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಇಸ್ರೇಲ್‌ ವಿದ್ಯುತ್ ಕಂಪನಿಗೆ ಆದೇಶ ನೀಡಿರುವುದಾಗಿ ಇಂಧನ ಸಚಿವರು ತಿಳಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...