Homeಅಂತರಾಷ್ಟ್ರೀಯಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

ಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

- Advertisement -
- Advertisement -

ಇಸ್ರೇಲ್ ಮೇಲೆ ಹಮಾಸ್‌ ಗುಂಪು ನಡೆಸಿದ ಹಠಾತ್ ರಾಕೆಟ್‌ ದಾಳಿ ಬಳಿಕ ಕಳೆದ 24 ಗಂಟೆಗಳಿಂದ ಇಸ್ರೇಲ್ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ಗುಂಪು ಹಮಾಸ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಉತ್ತರ ಇಸ್ರೇಲ್ ಮೇಲೆ ಲೆಬನಾನ್‌ ಶೆಲ್ ದಾಳಿಯನ್ನು ನಡೆಸಿದೆ. ಲೆಬನಾನಿನ ಹೆಜ್ಬೊಲ್ಲಾಹ್ ಸಂಘಟನೆ ಭಾನುವಾರ ಇಸ್ರೇಲ್ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್ ಲೆಬನಾನ್‌ಗೆ ಫಿರಂಗಿ ದಾಳಿ ನಡೆಸಿದೆ ಮತ್ತು ಗಡಿಯ ಸಮೀಪವಿರುವ ಹೆಜ್ಬೊಲ್ಲಾಹ್ ಪೋಸ್ಟ್‌ನ ಮೇಲೆ ಡ್ರೋನ್ ದಾಳಿ ನಡೆಸಿದೆ.

ಶನಿವಾರ ಬೆಳಗ್ಗೆ ಪ್ಯಾಲೇಸ್ತೀನ್‌ನ ಹಮಾಸ್ ಗುಂಪು ನಡೆಸಿದ ದಾಳಿ ಬಳಿಕ  ಇಸ್ರೇಲ್‌ನಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ  ಆಪರೇಷನ್ ಐರನ್ ಸ್ವೋರ್ಡ್ಸ್, ಇಸ್ರೇಲ್ ರಕ್ಷಣಾ ಪಡೆಗಳ ದಾಳಿಯಲ್ಲಿ ಗಾಜಾದಲ್ಲಿ 313 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಹಮಾಸ್ ಸಶಸ್ತ್ರ ವಿಭಾಗ, ಕಸ್ಸಾಮ್ ಬ್ರಿಗೇಡ್ಸ್, ಇಸ್ರೇಲ್‌ನ ಹಲವಾರು ಪ್ರದೇಶಗಳಲ್ಲಿ  ತೀವ್ರ ಘರ್ಷಣೆಯಲ್ಲಿ ತೊಡಗಿದೆ.

ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್) ತನ್ನ ಸೈನಿಕರು ಇಸ್ರೇಲ್‌ನೊಳಗೆ ಪ್ಯಾಲೇಸ್ತೀನಿ ಗುಂಪು ಹಮಾಸ್‌ನೊಂದಿಗೆ ಇನ್ನೂ ಯುದ್ಧದಲ್ಲಿ ತೊಡಗಿದ್ದಾರೆ ಎಂದು ಹೇಳಿದೆ. ಒಫಾಕಿಮ್, ಸ್ಡೆರೋಟ್, ಯಾದ್ ಮೊರ್ಡೆಚೈ, ಕ್ಫರ್ ಅಜ್ಜಾ, ಬೆಯೆರಿ, ಯತಿದ್ ಮತ್ತು ಕಿಸ್ಸುಫಿಮ್ ಸೇರಿದಂತೆ ಗಾಜಾ ಪಟ್ಟಿಯ ಗಡಿಯಲ್ಲಿರುವ ಇಸ್ರೇಲಿ ಪ್ರದೇಶಗಳಲ್ಲಿ ಹಮಾಸ್ ಜೊತೆ ಕದನ ನಡೆಯುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಉತ್ತರ ಇಸ್ರೇಲ್‌ನ ಗಡಿ ಪ್ರದೇಶಗಳು ಲೆಬನಾನ್‌ನಿಂದ ಶೆಲ್‌ ದಾಳಿಗೆ ಗುರಿಯಾಗಿವೆ. ಲೆಬನಾನಿನ ಹೆಜ್ಬೊಲ್ಲಾಹ್ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇಸ್ರೇಲಿ ಪಡೆಗಳು ಹಿಜ್ಬುಲ್ಲಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳ ಮೂಲಕ ಪ್ರತಿ ದಾಳಿ ನಡೆಸುತ್ತಿದೆ. ದಕ್ಷಿಣ ಇಸ್ರೇಲ್‌ನ ಹಲವು ಭಾಗಗಳಲ್ಲಿ ರಾಕೆಟ್ ಸೈರನ್‌ಗಳು ಸದ್ದು ಮಾಡುತ್ತಲೇ ಇವೆ ಎಂದು ಇಸ್ರೇಲ್‌ ಮಾದ್ಯಮ ವರದಿ ಮಾಡಿದೆ.

ಇಸ್ರೇಲ್‌ ನಡೆಸಿದ ವಾಯುದಾಳಿಯಿಂದ ಗಾಜಾ ನಗರದ ವಟಾನ್ ಟವರ್, ಅಲ್-ಅಕ್ಲೌಕ್ ಟವರ್ ಮತ್ತು ಮಾಟರ್ ವಸತಿ ಕಟ್ಟಡ ಸೇರಿದಂತೆ ಹೆಚ್ಚಿನ ವಸತಿ ಕಟ್ಟಡಗಳು ನೆಲಕ್ಕೆ ಉರುಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್ ಸರ್ಕಾರವು  ಗಾಜಾ ಪಟ್ಟಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಶನಿವಾರ ಗಾಜಾ ಪಟ್ಟಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಇಸ್ರೇಲ್‌ ವಿದ್ಯುತ್ ಕಂಪನಿಗೆ ಆದೇಶ ನೀಡಿರುವುದಾಗಿ ಇಂಧನ ಸಚಿವರು ತಿಳಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...