Homeಅಂತರಾಷ್ಟ್ರೀಯಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

ಇಸ್ರೇಲ್- ಹಮಾಸ್ ನಡುವೆ ಮುಂದುವರಿದ ಕದನ: ಮೃತರ ಸಂಖ್ಯೆ 613ಕ್ಕೆ ಏರಿಕೆ

- Advertisement -
- Advertisement -

ಇಸ್ರೇಲ್ ಮೇಲೆ ಹಮಾಸ್‌ ಗುಂಪು ನಡೆಸಿದ ಹಠಾತ್ ರಾಕೆಟ್‌ ದಾಳಿ ಬಳಿಕ ಕಳೆದ 24 ಗಂಟೆಗಳಿಂದ ಇಸ್ರೇಲ್ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ಗುಂಪು ಹಮಾಸ್ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಉತ್ತರ ಇಸ್ರೇಲ್ ಮೇಲೆ ಲೆಬನಾನ್‌ ಶೆಲ್ ದಾಳಿಯನ್ನು ನಡೆಸಿದೆ. ಲೆಬನಾನಿನ ಹೆಜ್ಬೊಲ್ಲಾಹ್ ಸಂಘಟನೆ ಭಾನುವಾರ ಇಸ್ರೇಲ್ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್ ಲೆಬನಾನ್‌ಗೆ ಫಿರಂಗಿ ದಾಳಿ ನಡೆಸಿದೆ ಮತ್ತು ಗಡಿಯ ಸಮೀಪವಿರುವ ಹೆಜ್ಬೊಲ್ಲಾಹ್ ಪೋಸ್ಟ್‌ನ ಮೇಲೆ ಡ್ರೋನ್ ದಾಳಿ ನಡೆಸಿದೆ.

ಶನಿವಾರ ಬೆಳಗ್ಗೆ ಪ್ಯಾಲೇಸ್ತೀನ್‌ನ ಹಮಾಸ್ ಗುಂಪು ನಡೆಸಿದ ದಾಳಿ ಬಳಿಕ  ಇಸ್ರೇಲ್‌ನಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ  ಆಪರೇಷನ್ ಐರನ್ ಸ್ವೋರ್ಡ್ಸ್, ಇಸ್ರೇಲ್ ರಕ್ಷಣಾ ಪಡೆಗಳ ದಾಳಿಯಲ್ಲಿ ಗಾಜಾದಲ್ಲಿ 313 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಹಮಾಸ್ ಸಶಸ್ತ್ರ ವಿಭಾಗ, ಕಸ್ಸಾಮ್ ಬ್ರಿಗೇಡ್ಸ್, ಇಸ್ರೇಲ್‌ನ ಹಲವಾರು ಪ್ರದೇಶಗಳಲ್ಲಿ  ತೀವ್ರ ಘರ್ಷಣೆಯಲ್ಲಿ ತೊಡಗಿದೆ.

ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್) ತನ್ನ ಸೈನಿಕರು ಇಸ್ರೇಲ್‌ನೊಳಗೆ ಪ್ಯಾಲೇಸ್ತೀನಿ ಗುಂಪು ಹಮಾಸ್‌ನೊಂದಿಗೆ ಇನ್ನೂ ಯುದ್ಧದಲ್ಲಿ ತೊಡಗಿದ್ದಾರೆ ಎಂದು ಹೇಳಿದೆ. ಒಫಾಕಿಮ್, ಸ್ಡೆರೋಟ್, ಯಾದ್ ಮೊರ್ಡೆಚೈ, ಕ್ಫರ್ ಅಜ್ಜಾ, ಬೆಯೆರಿ, ಯತಿದ್ ಮತ್ತು ಕಿಸ್ಸುಫಿಮ್ ಸೇರಿದಂತೆ ಗಾಜಾ ಪಟ್ಟಿಯ ಗಡಿಯಲ್ಲಿರುವ ಇಸ್ರೇಲಿ ಪ್ರದೇಶಗಳಲ್ಲಿ ಹಮಾಸ್ ಜೊತೆ ಕದನ ನಡೆಯುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಉತ್ತರ ಇಸ್ರೇಲ್‌ನ ಗಡಿ ಪ್ರದೇಶಗಳು ಲೆಬನಾನ್‌ನಿಂದ ಶೆಲ್‌ ದಾಳಿಗೆ ಗುರಿಯಾಗಿವೆ. ಲೆಬನಾನಿನ ಹೆಜ್ಬೊಲ್ಲಾಹ್ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇಸ್ರೇಲಿ ಪಡೆಗಳು ಹಿಜ್ಬುಲ್ಲಾ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ರಾಕೆಟ್‌ಗಳ ಮೂಲಕ ಪ್ರತಿ ದಾಳಿ ನಡೆಸುತ್ತಿದೆ. ದಕ್ಷಿಣ ಇಸ್ರೇಲ್‌ನ ಹಲವು ಭಾಗಗಳಲ್ಲಿ ರಾಕೆಟ್ ಸೈರನ್‌ಗಳು ಸದ್ದು ಮಾಡುತ್ತಲೇ ಇವೆ ಎಂದು ಇಸ್ರೇಲ್‌ ಮಾದ್ಯಮ ವರದಿ ಮಾಡಿದೆ.

ಇಸ್ರೇಲ್‌ ನಡೆಸಿದ ವಾಯುದಾಳಿಯಿಂದ ಗಾಜಾ ನಗರದ ವಟಾನ್ ಟವರ್, ಅಲ್-ಅಕ್ಲೌಕ್ ಟವರ್ ಮತ್ತು ಮಾಟರ್ ವಸತಿ ಕಟ್ಟಡ ಸೇರಿದಂತೆ ಹೆಚ್ಚಿನ ವಸತಿ ಕಟ್ಟಡಗಳು ನೆಲಕ್ಕೆ ಉರುಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್ ಸರ್ಕಾರವು  ಗಾಜಾ ಪಟ್ಟಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಶನಿವಾರ ಗಾಜಾ ಪಟ್ಟಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಇಸ್ರೇಲ್‌ ವಿದ್ಯುತ್ ಕಂಪನಿಗೆ ಆದೇಶ ನೀಡಿರುವುದಾಗಿ ಇಂಧನ ಸಚಿವರು ತಿಳಿಸಿದ್ದಾರೆ.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...