Homeಮುಖಪುಟರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲಿ ಪಡೆಗಳು ರಫಾದಲ್ಲಿ ವಿನ್ಯಾಸಗೊಳಿಸಲಾದ ಸುರಕ್ಷಿತ ವಲಯದಲ್ಲಿ ಸ್ಥಳಾಂತರಗೊಂಡ ಜನರು ವಾಸಿಸುವ ಟೆಂಟ್ ಕ್ಯಾಂಪ್ ಮೇಲೆ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 40 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್ ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಇಸ್ರೇಲಿ ಪಡೆಗಳು ತಾಲ್ ಅಸ್-ಸುಲ್ತಾನ್, ಜಬಾಲಿಯಾ, ನುಸೆರಾತ್ ಮತ್ತು ಗಾಜಾ ನಗರ ಸೇರಿದಂತೆ ಹಲವೆಡೆ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರ ಆಶ್ರಯಗಳ ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 160 ಮಂದಿ ಸಾವನ್ನಪ್ಪಿದ್ದಾರೆ.

ಇಸ್ರೇಲಿ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಹಮಾಸ್ ಅನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಈ ವೇಳೆ ಬೆಂಕಿಯಿಂದ ನಾಗರಿಕರು ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದೆ.

ಅಕ್ಟೋಬರ್ 7,2023ರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ ಸುಮಾರು 35,984 ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಮತ್ತು 80,643 ಜನರು ಗಾಯಗೊಂಡಿದ್ದಾರೆ.

ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್ ನಿರಂತರ ದಾಳಿ ನಡೆಸಿ ನರಕ ಮಾಡಿದೆ. ಜೀವ ಉಳಿಸಿಕೊಂಡ ಲಕ್ಷಾಂತರ ಜನರು ರಫಾದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ಇಸ್ರೇಲ್ ಈ ಪ್ರದೇಶವನ್ನೂ ಗುರಿಯಾಗಿಸಿದ್ದು, ಹಮಾಸ್ ಮೇಲೆ ದಾಳಿ ಮಾಡುವ ನೆಪದಲ್ಲಿ ಅಮಾಯಕ ನಾಗರಿಕರನ್ನು ಕೊಲ್ಲುತ್ತಿದೆ.

ಇಸ್ರೇಲ್‌ನ ನಿರಂತರ ದಾಳಿ ಮತ್ತು ಮಾನವೀಯ ನೆರವಿಗೆ ಅಡ್ಡಿ ಮಾಡಿದ ಕಾರಣ, ಜನರು ಆಹಾರ, ನೀರು ಹುಡುಕಲು ತಿಂಗಳುಗಳ ಕಾಲ ಪರದಾಡಿದರು. ಈಗ ರಫಾದಲ್ಲಿ ಟೆಂಟ್ ನಿರ್ಮಿಸಿ ಕೊಂಚ ನಿಟ್ಟುಸಿರುವ ಬಿಡುವ ಹೊತ್ತಿಗೆ ಇಸ್ರೇಲ್ ಅತ್ಯಂತ ಸುಡುವ ವಸ್ತುಗಳಿಂದ ರಫಾದ ಮೇಲೆ ದಾಳಿ ನಡೆಸಿದೆ ಎಂದು ಪ್ಯಾಲೆಸ್ತೀನಿಯನ್ ರಾಜಕೀಯ ವಿಶ್ಲೇಷಕ ಮತ್ತು ನಿರೂಪಕ ನೂರ್ ಒಡೆಹ್ ಅಲ್ ಜಝೀರಾಗೆ ಹೇಳಿದ್ದಾರೆ.

ಗಾಝಾದ ಜನತೆಗೆ ಜೀವ ಉಳಿಸಿಕೊಳ್ಳಲು ಇನ್ನು ಯಾವುದೇ ಜಾಗವಿಲ್ಲ, ಯಾವುದೇ ಆಸ್ಪತ್ರೆ ಸೌಲಭ್ಯಗಳಿಲ್ಲ ಎಂದು ಇಸ್ರೇಲ್‌ಗೆ ಚೆನ್ನಾಗಿ ಗೊತ್ತಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಯುಎಸ್ ಏನು ಹೇಳುತ್ತದೆ ಎಂದು ನೋಡಬೇಕು ಎಂದಿರುವ ಒಡೆಹ್, ಶಸ್ತ್ರಾಸ್ತ್ರ ಮತ್ತು ಆರ್ಥಿಕ ನಿರ್ಬಂಧ ಸೇರಿದಂತೆ ಹಣಕಾಸಿನ ಪರಿಣಾಮಗಳು ಮಾತ್ರ ಇಸ್ರೇಲಿ ದಾಳಿಯನ್ನು ಕೊನೆಗೊಳಿಸುವ ಏಕೈಕ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...