Homeಮುಖಪುಟರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲಿ ಪಡೆಗಳು ರಫಾದಲ್ಲಿ ವಿನ್ಯಾಸಗೊಳಿಸಲಾದ ಸುರಕ್ಷಿತ ವಲಯದಲ್ಲಿ ಸ್ಥಳಾಂತರಗೊಂಡ ಜನರು ವಾಸಿಸುವ ಟೆಂಟ್ ಕ್ಯಾಂಪ್ ಮೇಲೆ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 40 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್ ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಇಸ್ರೇಲಿ ಪಡೆಗಳು ತಾಲ್ ಅಸ್-ಸುಲ್ತಾನ್, ಜಬಾಲಿಯಾ, ನುಸೆರಾತ್ ಮತ್ತು ಗಾಜಾ ನಗರ ಸೇರಿದಂತೆ ಹಲವೆಡೆ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರ ಆಶ್ರಯಗಳ ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 160 ಮಂದಿ ಸಾವನ್ನಪ್ಪಿದ್ದಾರೆ.

ಇಸ್ರೇಲಿ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಹಮಾಸ್ ಅನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಈ ವೇಳೆ ಬೆಂಕಿಯಿಂದ ನಾಗರಿಕರು ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದೆ.

ಅಕ್ಟೋಬರ್ 7,2023ರಿಂದ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ ಸುಮಾರು 35,984 ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಮತ್ತು 80,643 ಜನರು ಗಾಯಗೊಂಡಿದ್ದಾರೆ.

ಗಾಝಾದ ಇತರ ಭಾಗಗಳಲ್ಲಿ ಇಸ್ರೇಲ್ ನಿರಂತರ ದಾಳಿ ನಡೆಸಿ ನರಕ ಮಾಡಿದೆ. ಜೀವ ಉಳಿಸಿಕೊಂಡ ಲಕ್ಷಾಂತರ ಜನರು ರಫಾದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ಇಸ್ರೇಲ್ ಈ ಪ್ರದೇಶವನ್ನೂ ಗುರಿಯಾಗಿಸಿದ್ದು, ಹಮಾಸ್ ಮೇಲೆ ದಾಳಿ ಮಾಡುವ ನೆಪದಲ್ಲಿ ಅಮಾಯಕ ನಾಗರಿಕರನ್ನು ಕೊಲ್ಲುತ್ತಿದೆ.

ಇಸ್ರೇಲ್‌ನ ನಿರಂತರ ದಾಳಿ ಮತ್ತು ಮಾನವೀಯ ನೆರವಿಗೆ ಅಡ್ಡಿ ಮಾಡಿದ ಕಾರಣ, ಜನರು ಆಹಾರ, ನೀರು ಹುಡುಕಲು ತಿಂಗಳುಗಳ ಕಾಲ ಪರದಾಡಿದರು. ಈಗ ರಫಾದಲ್ಲಿ ಟೆಂಟ್ ನಿರ್ಮಿಸಿ ಕೊಂಚ ನಿಟ್ಟುಸಿರುವ ಬಿಡುವ ಹೊತ್ತಿಗೆ ಇಸ್ರೇಲ್ ಅತ್ಯಂತ ಸುಡುವ ವಸ್ತುಗಳಿಂದ ರಫಾದ ಮೇಲೆ ದಾಳಿ ನಡೆಸಿದೆ ಎಂದು ಪ್ಯಾಲೆಸ್ತೀನಿಯನ್ ರಾಜಕೀಯ ವಿಶ್ಲೇಷಕ ಮತ್ತು ನಿರೂಪಕ ನೂರ್ ಒಡೆಹ್ ಅಲ್ ಜಝೀರಾಗೆ ಹೇಳಿದ್ದಾರೆ.

ಗಾಝಾದ ಜನತೆಗೆ ಜೀವ ಉಳಿಸಿಕೊಳ್ಳಲು ಇನ್ನು ಯಾವುದೇ ಜಾಗವಿಲ್ಲ, ಯಾವುದೇ ಆಸ್ಪತ್ರೆ ಸೌಲಭ್ಯಗಳಿಲ್ಲ ಎಂದು ಇಸ್ರೇಲ್‌ಗೆ ಚೆನ್ನಾಗಿ ಗೊತ್ತಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಯುಎಸ್ ಏನು ಹೇಳುತ್ತದೆ ಎಂದು ನೋಡಬೇಕು ಎಂದಿರುವ ಒಡೆಹ್, ಶಸ್ತ್ರಾಸ್ತ್ರ ಮತ್ತು ಆರ್ಥಿಕ ನಿರ್ಬಂಧ ಸೇರಿದಂತೆ ಹಣಕಾಸಿನ ಪರಿಣಾಮಗಳು ಮಾತ್ರ ಇಸ್ರೇಲಿ ದಾಳಿಯನ್ನು ಕೊನೆಗೊಳಿಸುವ ಏಕೈಕ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...