Homeಅಂತರಾಷ್ಟ್ರೀಯಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

- Advertisement -
- Advertisement -

ಇಸ್ರೇಲ್‌ ಅ.7ರಿಂದ ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿಯನ್ನು ನಡೆಸುತ್ತಿದೆ. ಈವರೆಗೆ ಗಾಝಾದಲ್ಲಿ 19,000ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಹಲವು ದೇಶಗಳು ಖಂಡಿಸಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿತ್ತು. ಯುಎನ್‌ ಕೂಡ ಹಲವು ಬಾರಿ ಕದನ ವಿರಾಮಕ್ಕೆ ನಿರ್ಣಯ ಮಂಡಿಸಿದೆ. ಆದರೆ ಇಸ್ರೇಲ್‌ ಮಾತ್ರ ಪ್ಯಾಲೆಸ್ತೀನ್‌ನ ಮಕ್ಕಳು, ಮಹಿಳೆಯರು, ನಾಗರಿಕರ ಹತ್ಯಾಕಾಂಡವನ್ನು ಮುಂದುವರಿಸಿದೆ. ಇದೀಗ ಇಸ್ರೇಲ್‌ನ ಯುದ್ಧದಾಹಕ್ಕೆ ತನ್ನದೇ ದೇಶದ ಒತ್ತೆಯಾಳುಗಳನ್ನು ಇಸ್ರೇಲ್‌ ಮಿಲಿಟರಿ ಪಡೆ ಹತ್ಯೆ ಮಾಡಿದ್ದು, ಇಸ್ರೇಲ್‌ ಪ್ರಧಾನಿ ನೆತನ್ಯಾಹು ಇದು ತಿಳಿಯದೆ ನಡೆದ ದೊಡ್ಡ ಪ್ರಮಾದವೆಂದು ಹೇಳಿಕೊಂಡಿದ್ದಾರೆ.

ಹಮಾಸ್‌ ಜೊತೆಗಿನ ಸಂಘರ್ಷದ ವೇಳೆ ಮೂವರು ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಲ್ಲಲಾಯಿತು. ಗಾಝಾದಲ್ಲಿ ಯುದ್ಧದ ಸಮಯದಲ್ಲಿ ಮೂವರು ಇಸ್ರೇಲ್‌ ಒತ್ತೆಯಾಳುಗಳನ್ನು ತಮಗೆ ಅಪಾಯ ತರಬಹುದು ಎಂದು ತಪ್ಪಾಗಿ ಭಾವಿಸಿ ಇಸ್ರೇಲ್‌ ಸೇನೆ ಗುಂಡು ಹಾರಿಸಿ ಹತ್ಯೆ ಮಾಡಿದೆ. ಈ ಘಟನೆಯ ತನಿಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ವಹಿಸಲಾಗುವುದು ಮತ್ತು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುವುದಾಗಿ ಇಸ್ರೇಲ್‌ ಮಿಲಿಟರಿ ಹೇಳಿದೆ.

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಒತ್ತೆಯಾಳುಗಳು ಮತ್ತು ಕಾಣೆಯಾದ ವ್ಯಕ್ತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ವೇದಿಕೆಯು ಖಂಡಿಸಿದೆ.

ಅಕ್ಟೋಬರ್ 7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು. ತಾತ್ಕಾಲಿಕ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧ ಆರಂಭಿಸಿದಾಗ ಯುಎನ್‌ ವಿಶ್ವಸಂಸ್ಥೆಯಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ನಿರ್ಣಾಯವನನ್ನು ಅಂಗೀಕರಿಸಿತ್ತು. ಆದರೆ ಅಮೆರಿಕ ಇದನ್ನು ವಿಟೊ ಅಧಿಕಾರ ಬಳಸಿ ರದ್ದು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...