Homeಅಂತರಾಷ್ಟ್ರೀಯಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

- Advertisement -
- Advertisement -

ಇಸ್ರೇಲ್‌ ಅ.7ರಿಂದ ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿಯನ್ನು ನಡೆಸುತ್ತಿದೆ. ಈವರೆಗೆ ಗಾಝಾದಲ್ಲಿ 19,000ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಹಲವು ದೇಶಗಳು ಖಂಡಿಸಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿತ್ತು. ಯುಎನ್‌ ಕೂಡ ಹಲವು ಬಾರಿ ಕದನ ವಿರಾಮಕ್ಕೆ ನಿರ್ಣಯ ಮಂಡಿಸಿದೆ. ಆದರೆ ಇಸ್ರೇಲ್‌ ಮಾತ್ರ ಪ್ಯಾಲೆಸ್ತೀನ್‌ನ ಮಕ್ಕಳು, ಮಹಿಳೆಯರು, ನಾಗರಿಕರ ಹತ್ಯಾಕಾಂಡವನ್ನು ಮುಂದುವರಿಸಿದೆ. ಇದೀಗ ಇಸ್ರೇಲ್‌ನ ಯುದ್ಧದಾಹಕ್ಕೆ ತನ್ನದೇ ದೇಶದ ಒತ್ತೆಯಾಳುಗಳನ್ನು ಇಸ್ರೇಲ್‌ ಮಿಲಿಟರಿ ಪಡೆ ಹತ್ಯೆ ಮಾಡಿದ್ದು, ಇಸ್ರೇಲ್‌ ಪ್ರಧಾನಿ ನೆತನ್ಯಾಹು ಇದು ತಿಳಿಯದೆ ನಡೆದ ದೊಡ್ಡ ಪ್ರಮಾದವೆಂದು ಹೇಳಿಕೊಂಡಿದ್ದಾರೆ.

ಹಮಾಸ್‌ ಜೊತೆಗಿನ ಸಂಘರ್ಷದ ವೇಳೆ ಮೂವರು ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಲ್ಲಲಾಯಿತು. ಗಾಝಾದಲ್ಲಿ ಯುದ್ಧದ ಸಮಯದಲ್ಲಿ ಮೂವರು ಇಸ್ರೇಲ್‌ ಒತ್ತೆಯಾಳುಗಳನ್ನು ತಮಗೆ ಅಪಾಯ ತರಬಹುದು ಎಂದು ತಪ್ಪಾಗಿ ಭಾವಿಸಿ ಇಸ್ರೇಲ್‌ ಸೇನೆ ಗುಂಡು ಹಾರಿಸಿ ಹತ್ಯೆ ಮಾಡಿದೆ. ಈ ಘಟನೆಯ ತನಿಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ವಹಿಸಲಾಗುವುದು ಮತ್ತು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುವುದಾಗಿ ಇಸ್ರೇಲ್‌ ಮಿಲಿಟರಿ ಹೇಳಿದೆ.

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಒತ್ತೆಯಾಳುಗಳು ಮತ್ತು ಕಾಣೆಯಾದ ವ್ಯಕ್ತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ವೇದಿಕೆಯು ಖಂಡಿಸಿದೆ.

ಅಕ್ಟೋಬರ್ 7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು. ತಾತ್ಕಾಲಿಕ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧ ಆರಂಭಿಸಿದಾಗ ಯುಎನ್‌ ವಿಶ್ವಸಂಸ್ಥೆಯಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ನಿರ್ಣಾಯವನನ್ನು ಅಂಗೀಕರಿಸಿತ್ತು. ಆದರೆ ಅಮೆರಿಕ ಇದನ್ನು ವಿಟೊ ಅಧಿಕಾರ ಬಳಸಿ ರದ್ದು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...