Homeಅಂತರಾಷ್ಟ್ರೀಯಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

- Advertisement -
- Advertisement -

ಇಸ್ರೇಲ್‌ ಅ.7ರಿಂದ ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿಯನ್ನು ನಡೆಸುತ್ತಿದೆ. ಈವರೆಗೆ ಗಾಝಾದಲ್ಲಿ 19,000ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಹಲವು ದೇಶಗಳು ಖಂಡಿಸಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿತ್ತು. ಯುಎನ್‌ ಕೂಡ ಹಲವು ಬಾರಿ ಕದನ ವಿರಾಮಕ್ಕೆ ನಿರ್ಣಯ ಮಂಡಿಸಿದೆ. ಆದರೆ ಇಸ್ರೇಲ್‌ ಮಾತ್ರ ಪ್ಯಾಲೆಸ್ತೀನ್‌ನ ಮಕ್ಕಳು, ಮಹಿಳೆಯರು, ನಾಗರಿಕರ ಹತ್ಯಾಕಾಂಡವನ್ನು ಮುಂದುವರಿಸಿದೆ. ಇದೀಗ ಇಸ್ರೇಲ್‌ನ ಯುದ್ಧದಾಹಕ್ಕೆ ತನ್ನದೇ ದೇಶದ ಒತ್ತೆಯಾಳುಗಳನ್ನು ಇಸ್ರೇಲ್‌ ಮಿಲಿಟರಿ ಪಡೆ ಹತ್ಯೆ ಮಾಡಿದ್ದು, ಇಸ್ರೇಲ್‌ ಪ್ರಧಾನಿ ನೆತನ್ಯಾಹು ಇದು ತಿಳಿಯದೆ ನಡೆದ ದೊಡ್ಡ ಪ್ರಮಾದವೆಂದು ಹೇಳಿಕೊಂಡಿದ್ದಾರೆ.

ಹಮಾಸ್‌ ಜೊತೆಗಿನ ಸಂಘರ್ಷದ ವೇಳೆ ಮೂವರು ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಲ್ಲಲಾಯಿತು. ಗಾಝಾದಲ್ಲಿ ಯುದ್ಧದ ಸಮಯದಲ್ಲಿ ಮೂವರು ಇಸ್ರೇಲ್‌ ಒತ್ತೆಯಾಳುಗಳನ್ನು ತಮಗೆ ಅಪಾಯ ತರಬಹುದು ಎಂದು ತಪ್ಪಾಗಿ ಭಾವಿಸಿ ಇಸ್ರೇಲ್‌ ಸೇನೆ ಗುಂಡು ಹಾರಿಸಿ ಹತ್ಯೆ ಮಾಡಿದೆ. ಈ ಘಟನೆಯ ತನಿಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ವಹಿಸಲಾಗುವುದು ಮತ್ತು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುವುದಾಗಿ ಇಸ್ರೇಲ್‌ ಮಿಲಿಟರಿ ಹೇಳಿದೆ.

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಒತ್ತೆಯಾಳುಗಳು ಮತ್ತು ಕಾಣೆಯಾದ ವ್ಯಕ್ತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ವೇದಿಕೆಯು ಖಂಡಿಸಿದೆ.

ಅಕ್ಟೋಬರ್ 7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು. ತಾತ್ಕಾಲಿಕ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧ ಆರಂಭಿಸಿದಾಗ ಯುಎನ್‌ ವಿಶ್ವಸಂಸ್ಥೆಯಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ನಿರ್ಣಾಯವನನ್ನು ಅಂಗೀಕರಿಸಿತ್ತು. ಆದರೆ ಅಮೆರಿಕ ಇದನ್ನು ವಿಟೊ ಅಧಿಕಾರ ಬಳಸಿ ರದ್ದು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...