Homeಅಂತರಾಷ್ಟ್ರೀಯಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

ಇಸ್ರೇಲ್‌ನ ಯುದ್ಧ ದಾಹಕ್ಕೆ ತಮ್ಮದೇ ದೇಶದ ಮೂವರು ನಾಗರಿಕರು ಬಲಿ; ಪ್ರಮಾದವಾಯ್ತೆಂದ ನೆತನ್ಯಾಹು

- Advertisement -
- Advertisement -

ಇಸ್ರೇಲ್‌ ಅ.7ರಿಂದ ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿಯನ್ನು ನಡೆಸುತ್ತಿದೆ. ಈವರೆಗೆ ಗಾಝಾದಲ್ಲಿ 19,000ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಹಲವು ದೇಶಗಳು ಖಂಡಿಸಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿತ್ತು. ಯುಎನ್‌ ಕೂಡ ಹಲವು ಬಾರಿ ಕದನ ವಿರಾಮಕ್ಕೆ ನಿರ್ಣಯ ಮಂಡಿಸಿದೆ. ಆದರೆ ಇಸ್ರೇಲ್‌ ಮಾತ್ರ ಪ್ಯಾಲೆಸ್ತೀನ್‌ನ ಮಕ್ಕಳು, ಮಹಿಳೆಯರು, ನಾಗರಿಕರ ಹತ್ಯಾಕಾಂಡವನ್ನು ಮುಂದುವರಿಸಿದೆ. ಇದೀಗ ಇಸ್ರೇಲ್‌ನ ಯುದ್ಧದಾಹಕ್ಕೆ ತನ್ನದೇ ದೇಶದ ಒತ್ತೆಯಾಳುಗಳನ್ನು ಇಸ್ರೇಲ್‌ ಮಿಲಿಟರಿ ಪಡೆ ಹತ್ಯೆ ಮಾಡಿದ್ದು, ಇಸ್ರೇಲ್‌ ಪ್ರಧಾನಿ ನೆತನ್ಯಾಹು ಇದು ತಿಳಿಯದೆ ನಡೆದ ದೊಡ್ಡ ಪ್ರಮಾದವೆಂದು ಹೇಳಿಕೊಂಡಿದ್ದಾರೆ.

ಹಮಾಸ್‌ ಜೊತೆಗಿನ ಸಂಘರ್ಷದ ವೇಳೆ ಮೂವರು ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಲ್ಲಲಾಯಿತು. ಗಾಝಾದಲ್ಲಿ ಯುದ್ಧದ ಸಮಯದಲ್ಲಿ ಮೂವರು ಇಸ್ರೇಲ್‌ ಒತ್ತೆಯಾಳುಗಳನ್ನು ತಮಗೆ ಅಪಾಯ ತರಬಹುದು ಎಂದು ತಪ್ಪಾಗಿ ಭಾವಿಸಿ ಇಸ್ರೇಲ್‌ ಸೇನೆ ಗುಂಡು ಹಾರಿಸಿ ಹತ್ಯೆ ಮಾಡಿದೆ. ಈ ಘಟನೆಯ ತನಿಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ವಹಿಸಲಾಗುವುದು ಮತ್ತು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುವುದಾಗಿ ಇಸ್ರೇಲ್‌ ಮಿಲಿಟರಿ ಹೇಳಿದೆ.

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಒತ್ತೆಯಾಳುಗಳು ಮತ್ತು ಕಾಣೆಯಾದ ವ್ಯಕ್ತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ವೇದಿಕೆಯು ಖಂಡಿಸಿದೆ.

ಅಕ್ಟೋಬರ್ 7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು. ತಾತ್ಕಾಲಿಕ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಯುದ್ಧ ಆರಂಭಿಸಿದಾಗ ಯುಎನ್‌ ವಿಶ್ವಸಂಸ್ಥೆಯಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ನಿರ್ಣಾಯವನನ್ನು ಅಂಗೀಕರಿಸಿತ್ತು. ಆದರೆ ಅಮೆರಿಕ ಇದನ್ನು ವಿಟೊ ಅಧಿಕಾರ ಬಳಸಿ ರದ್ದು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...