Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...