Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...