Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...