Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...