Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...