Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾದತ್ತ ತೆರಳಿದ್ದ 'ಮದ್ಲೀನ್' ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ...

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

- Advertisement -
- Advertisement -

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ.

ಗಾಝಾಗೆ ಅಗತ್ಯ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳು ಪ್ರವೇಶಿಸದಂತೆ ಇಸ್ರೇಲ್ ತಡೆಯೊಡ್ಡಿದೆ. ಇದರಿಂದ ಅಲ್ಲಿನ ಜನರು ಆಹಾರ, ನೀರು ಸಿಗದೆ ಪರದಾಡುತ್ತಿದ್ದಾರೆ. ಹಾಗಾಗಿ, ಸಮುದ್ರ ಮಾರ್ಗದ ಮೂಲಕ ಆಹಾರ, ನೀರು, ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಅಗತ್ಯ ಮಾನವೀಯ ನೆರವು ಹೊತ್ತು ಮದ್ಲೀನ್ ಹಡಗು ಜೂನ್ 1ರಂದು ಇಟಲಿಯ ಸಿಸಿಲಿಯಿಂದ ಹೊರಟಿತ್ತು.

ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿ ಇದ್ದರು.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಆರೋಪಿಸಿದೆ. ಫೇಸ್‌ಬುಕ್‌ನಲ್ಲಿ ಗ್ರೆಟಾ ಥನ್‌ಬರ್ಗ್, ರಿಮಾ ಹಸನ್ ಸೇರಿದಂತೆ ಹಡಗಿನಲ್ಲಿದ್ದವರ ಹೇಳಿಕೆಗಳ ವಿಡಿಯೋಗಳನ್ನು ಸರಣಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಪ್ರತಿಯೊಬ್ಬರ ವಿಡಿಯೋದಲ್ಲಿಯೂ ಅವರ ದೇಶವನ್ನು ಉಲ್ಲೇಖಿಸಿ, ಆಯಾ ದೇಶದ ವಿದೇಶಾಂಗ ಇಲಾಖೆ ಮೂಲಕ ನಮಗೆ ಸಹಾಯ ಮಾಡಿ ಎಂದು ಕೋರಿದೆ.

ವಿಡಿಯೋಗಳಲ್ಲಿ ಮಾತನಾಡಿದವರೂ ಕೂಡ “ನಾನು ನಿರ್ದಿಷ್ಟ ದೇಶದ ಪ್ರಜೆ, ನನ್ನನ್ನು ಇಸ್ರೇಲಿ ಪಡೆ ಅಪಹರಣ ಮಾಡಿದೆ. ಇಸ್ರೇಲ್ ಸರ್ಕಾರದ ಮೇಲೆ ಒತ್ತಡ ಹಾಕಿ ನನ್ನನ್ನು ಬಿಡುಗಡೆ ಮಾಡಿಸಲು ನಮ್ಮ ಸರ್ಕಾರಕ್ಕೆ ಹೇಳಿ ಎಂದು ಕೋರಿದ್ದಾರೆ.

ಬಿಬಿಸಿ, ಅಲ್‌-ಜಝೀರಾ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳಲ್ಲಿ, ಲೈಫ್ ಜಾಕೆಟ್ ತೊಟ್ಟ ಹಲವು ಜನರು ತಮ್ಮ ಕೈಗಳನ್ನು ಮೇಲೆತ್ತಿ ಕುಳಿತಿರುವ ಫೋಟೋ ಇದೆ. ಇದು ಇಸ್ರೇಲಿ ಪಡೆ ಮದ್ಲೀನ್ ಹಡಗಿನಲ್ಲಿದ್ದವರನ್ನು ವಶಕ್ಕೆ ಪಡೆದ ಫೋಟೋ ಎಂದು ಹೇಳಲಾಗ್ತಿದೆ.

ಮದ್ಲೀನ್ ಹಡಗನ್ನು ಇಸ್ರೇಲಿ ಪಡೆ ವಶಕ್ಕೆ ಪಡೆದಿದೆ ಎಂದು ಆರೋಪಿಸಿದ್ದ ಫ್ರೀಡಂ ಫ್ಲೋಟಿಲ್ಲಾ ಭಾನುವಾರ ಟೆಲಿಗ್ರಾಂನಲ್ಲಿ ಈ ಫೋಟೋ ಹಂಚಿಕೊಂಡಿತ್ತು ಎಂದು ವರದಿಯಾಗಿದೆ.

ಎಲ್ಲರೂ ಸುರಕ್ಷಿತ ಎಂದ ಇಸ್ರೇಲ್ 

ಹಡಗಿನಲ್ಲಿದ್ದ ಎಲ್ಲ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಯಾವುದೇ ಹಾನಿಗೊಳಗಾಗಿಲ್ಲ. ಅವರಿಗೆ ಸ್ಯಾಂಡ್‌ವಿಚ್ ಮತ್ತು ನೀರು ಕೊಡಲಾಗಿದೆ ಎಂದು ಸೋಮವಾರ ಮುಂಜಾನೆ (ಭಾರತೀಯ ಕಾಲಮಾನ) ಇಸ್ರೇಲ್ ವಿದೇಶಾಂಗ ಇಲಾಖೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಗ್ರೆಟಾ ಥನ್‌ಬರ್ಗ್ ಅವರ ಫೋಟೋ ಹಂಚಿಕೊಂಡಿರುವ ವಿದೇಶಾಂಗ ಇಲಾಖೆ, ಗ್ರೆಟಾ ಇಸ್ರೇಲ್ ಕಡೆ ಪ್ರಯಾಣಿಸುತ್ತಿದ್ದಾರೆ. ಅವರು ಸುರಕ್ಷಿತರಾಗಿದ್ದಾರೆ ಮತ್ತು ಉತ್ಸಾಹದಲ್ಲಿದ್ದಾರೆ ಎಂದು ಬರೆದುಕೊಂಡಿದೆ.

ಅಕ್ರಮ ವಲಸಿಗರೆಂದು ಭಾರತೀಯರ ಗಡಿಪಾರು?..ಅಸ್ಸಾಂನಲ್ಲಿ ಆಗುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...