Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...