Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...