Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...