Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...