Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಪ್ಯಾಲೆಸ್ತೀನಿಯರ ಜನಾಂಗೀಯ ನಿರ್ಮೂಲನೆ ನಿಲ್ಲಿಸಲು ಚಿತ್ರ ತಂಡ ಆಗ್ರಹ

- Advertisement -
- Advertisement -

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ ಜೊತೆಗಿನ ಸ್ಪರ್ಧೆಯಲ್ಲಿ ಭಾನುವಾರ (ಮಾ.2) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

2019 ಮತ್ತು 2023ರ ನಡುವೆ ‘ನೋ ಅದರ್ ಲ್ಯಾಂಡ್’ ಚಿತ್ರವನ್ನು ನಿರ್ಮಿಸಲಾಗಿದೆ. ಆ ಬಳಿಕ ನಿರ್ದೇಶಕರ ಪೈಕಿ ಒಬ್ಬರಾದ ಬೇಸಲ್ ಅದ್ರಾ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಬೇಸಲ್ ಅದ್ರಾ ಅವರ ಹುಟ್ಟೂರು ಮಸಾಫರ್ ಯಟ್ಟಾವನ್ನು ಇಸ್ರೇಲ್‌ ಸೈನಿಕರು ಆಕ್ರಮಿಸಿಕೊಂಡು ಪಶ್ಚಿಮ ದಂಡೆಯ ದಕ್ಷಿಣ ತುದಿಯನ್ನು ಮಿಲಿಟರಿ ತರಬೇತಿ ವಲಯವಾಗಿ ನಿರ್ಮಿಸಲು ಮುಂದಾಗಿದ್ದ ಬಗ್ಗೆ ಚಿತ್ರ ಗಮನ ಸೆಳೆದಿತ್ತು.

ಆದ್ರಾ ಅವರು ಯಹೂದಿ-ಇಸ್ರೇಲಿ ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸುವವರೆಗೂ ಅವರ ಧ್ವನಿಯನ್ನು ಕೇಳುವವರು ಇರಲಿಲ್ಲ. ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸಿದ ನಂತರ, ಅವರು ಆದ್ರಾ ಅವರ ಕಥೆಯನ್ನು ಹೊರ ಜಗತ್ತಿಗೆ ತಿಳಿಸಲು ಸಹಾಯ ಮಾಡುತ್ತಾರೆ.

ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಆದ್ರಾ, ‘ನೋ ಅದರ್ ಲ್ಯಾಂಡ್’ ಪ್ಯಾಲೆಸ್ತೀನಿಯರು ದಶಕಗಳಿಂದ ಅನುಭವಿಸುತ್ತಿರುವ ಕಠೋರ ವಾಸ್ತವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಎರಡು ತಿಂಗಳ ಹಿಂದೆಯಷ್ಟೇ ನಾನು ತಂದೆಯಾದೆ. ನನ್ನ ಮಗಳು ನಾನು ಈಗ ಬದುಕುತ್ತಿರುವಂತೆ ಬದುಕಬಾರದು ಎಂಬ ಆಶಯವನ್ನು ಹೊಂದಿದ್ದೇನೆ. ಈಗ ಪ್ರತಿದಿನ ವಸಾಹತುಗಾರರು, ಹಿಂಸಾಚಾರ ಮಾಡುತ್ತಿದ್ದಾರೆ, ಮನೆಗಳನ್ನು ಉರುಳಿಸುತ್ತಿದ್ದಾರೆ. ಬಲವಂತದಿಂದ ಸ್ಥಳಾಂತರ ಮಾಡುತ್ತಿದ್ದಾರೆ. ನನ್ನ ಸಮುದಾಯ ಇಸ್ರೇಲ್‌ ಆಕ್ರಮಣವನ್ನು ಎದುರಿಸಿಕೊಂಡೇ ಪ್ರತಿದಿನ ವಾಸಿಸುತ್ತಿದೆ ಮತ್ತು ಅನುಭವಿಸುತ್ತಿದೆ” ಎಂದು ಆದ್ರಾ ಹೇಳಿದ್ದಾರೆ.

“ಪ್ಯಾಲೆಸ್ತೀನಿಯನ್ ಜನರ ಮೇಲಿನ ಅನ್ಯಾಯ ಮತ್ತು ಜನಾಂಗೀಯ ನಿರ್ಮೂಲನೆಯನ್ನು ನಿಲ್ಲಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಅವರು ಜಗತ್ತಿಗೆ ಕರೆ ನೀಡಿದ್ದಾರೆ.

ಪ್ಯಾಲೆಸ್ತೀನಿಯರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಇಸ್ರೇಲ್ ಪತ್ರಕರ್ತ ಯುವಲ್ ಅಬ್ರಹಾಂ, “ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲಿಗರಾದ ನಾವು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸಿದ್ದೇವೆ. ಕಾರಣ, ನಮ್ಮ ಧ್ವನಿಗಳು ಶಕ್ತಿಶಾಲಿಯಾಗಿವೆ. ಅಂತ್ಯಗೊಳ್ಳಲೇಬೇಕಾದ ಗಾಝಾ ಹಾಗೂ ಅಲ್ಲಿನ ಜನರ ವಿನಾಶವನ್ನು ನಾವಿಬ್ಬರೂ ನೋಡುತ್ತಿದ್ದೇವೆ. ಅಕ್ಟೋಬರ್ 7ರಂದು ಅತ್ಯಂತ ಅಮಾನುಷವಾಗಿ ಒತ್ತೆಯಾಳುಗಳನ್ನಾಗಿಸಿಕೊಳ್ಳಲಾಗಿರುವ ಇಸ್ರೇಲ್ ಪ್ರಜೆಗಳನ್ನು ಕೂಡ ಬಿಡುಗಡೆ ಮಾಡಲೇಬೇಕು” ಎಂದಿದ್ದಾರೆ.

ತಮ್ಮಿಬ್ಬರ ನಡುವಿನ ಅಸಮಾನತೆಯ ಮೇಲೂ ಬೆಳಕು ಚೆಲ್ಲಿದ ಅಬ್ರಹಾಂ, “ನಾನು ನಾಗರಿಕ ಕಾನೂನುಗಳಿರುವ ಪ್ರಭುತ್ವದಡಿ ಸ್ವತಂತ್ರವಾಗಿ ಜೀವಿಸುತ್ತಿದ್ದರೆ, ತನ್ನ ಜೀವನವನ್ನು ನಾಶಗೊಳಿಸಿದ ಹಾಗೂ ಅದನ್ನು ತನ್ನಿಂದ ತಡೆಯಲಾಗದ ಆದ್ರಾ ಸೇನಾ ಕಾನೂನುಗಳ ಆಡಳಿತದಡಿ ಜೀವಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಿಕ್ಕಟ್ಟಿಗೆ ಭಿನ್ನ ದಾರಿಯಿದ್ದು, ಜನಾಂಗೀಯ ಮೇಲರಿಮೆಯಿಲ್ಲದ, ಎರಡೂ ಕಡೆಯ ಜನರಿಗೆ ರಾಷ್ಟ್ರೀಯ ಹಕ್ಕುಗಳಿರುವ ರಾಜಕೀಯ ಪರಿಹಾರ ಸಾಧ್ಯವಿದೆ” ಎಂದೂ ಅವರು ಸಲಹೆ ನೀಡಿದ್ದಾರೆ.

ಅಮೆರಿಕ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅಬ್ರಹಾಂ, “ಆದ್ರಾ ಅವರ ಜನರಿಗೆ ನೈಜ ಸ್ವಾತಂತ್ರ್ಯ ದೊರೆತಾಗ ಮಾತ್ರ ನಾವು ಸುರಕ್ಷಿತ ಎಂಬಂತೆ ನಾವಿಬ್ಬರೂ ಪರಸ್ಪರ ಬೆಸೆದುಕೊಂಡಿರುವುದು ನಿಮಗೇಕೆ ಕಾಣುತ್ತಿಲ್ಲ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಾಲ್ವರು ಹೋರಾಟಗಾರರು ಒಟ್ಟಾಗಿ ನಿರ್ಮಿಸಿದ್ದು, ಸದ್ಯ ಮುಂದುವರಿದಿರುವ ಪ್ರಾಂತೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಕ್ಕಾಗಿ ತೋರುವ ಪ್ರತಿರೋಧದ ಕ್ರಿಯೆಯನ್ನು ಈ ಸಾಕ್ಷ್ಯಚಿತ್ರ ಮಂಡಿಸುತ್ತದೆ.

ಬರ್ಲಿನ್ 74ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ‘ನೋ ಅದರ್ ಲ್ಯಾಂಡ್’ ಆಯ್ಕೆಯಾಗಿತ್ತು. ಫೆಬ್ರವರಿ 14, 2024ರಂದು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಸಾಕ್ಷ್ಯಚಿತ್ರವು, ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪನೋರಮಾ ಪ್ರೇಕ್ಷಕರ ಪ್ರಶಸ್ತಿ ಹಾಗೂ ಬರ್ಲಿನ್ ಸಾಕ್ಷ್ಯಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...