Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಪ್ಯಾಲೆಸ್ತೀನಿಯರ ಜನಾಂಗೀಯ ನಿರ್ಮೂಲನೆ ನಿಲ್ಲಿಸಲು ಚಿತ್ರ ತಂಡ ಆಗ್ರಹ

- Advertisement -
- Advertisement -

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ ಜೊತೆಗಿನ ಸ್ಪರ್ಧೆಯಲ್ಲಿ ಭಾನುವಾರ (ಮಾ.2) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

2019 ಮತ್ತು 2023ರ ನಡುವೆ ‘ನೋ ಅದರ್ ಲ್ಯಾಂಡ್’ ಚಿತ್ರವನ್ನು ನಿರ್ಮಿಸಲಾಗಿದೆ. ಆ ಬಳಿಕ ನಿರ್ದೇಶಕರ ಪೈಕಿ ಒಬ್ಬರಾದ ಬೇಸಲ್ ಅದ್ರಾ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಬೇಸಲ್ ಅದ್ರಾ ಅವರ ಹುಟ್ಟೂರು ಮಸಾಫರ್ ಯಟ್ಟಾವನ್ನು ಇಸ್ರೇಲ್‌ ಸೈನಿಕರು ಆಕ್ರಮಿಸಿಕೊಂಡು ಪಶ್ಚಿಮ ದಂಡೆಯ ದಕ್ಷಿಣ ತುದಿಯನ್ನು ಮಿಲಿಟರಿ ತರಬೇತಿ ವಲಯವಾಗಿ ನಿರ್ಮಿಸಲು ಮುಂದಾಗಿದ್ದ ಬಗ್ಗೆ ಚಿತ್ರ ಗಮನ ಸೆಳೆದಿತ್ತು.

ಆದ್ರಾ ಅವರು ಯಹೂದಿ-ಇಸ್ರೇಲಿ ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸುವವರೆಗೂ ಅವರ ಧ್ವನಿಯನ್ನು ಕೇಳುವವರು ಇರಲಿಲ್ಲ. ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸಿದ ನಂತರ, ಅವರು ಆದ್ರಾ ಅವರ ಕಥೆಯನ್ನು ಹೊರ ಜಗತ್ತಿಗೆ ತಿಳಿಸಲು ಸಹಾಯ ಮಾಡುತ್ತಾರೆ.

ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಆದ್ರಾ, ‘ನೋ ಅದರ್ ಲ್ಯಾಂಡ್’ ಪ್ಯಾಲೆಸ್ತೀನಿಯರು ದಶಕಗಳಿಂದ ಅನುಭವಿಸುತ್ತಿರುವ ಕಠೋರ ವಾಸ್ತವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಎರಡು ತಿಂಗಳ ಹಿಂದೆಯಷ್ಟೇ ನಾನು ತಂದೆಯಾದೆ. ನನ್ನ ಮಗಳು ನಾನು ಈಗ ಬದುಕುತ್ತಿರುವಂತೆ ಬದುಕಬಾರದು ಎಂಬ ಆಶಯವನ್ನು ಹೊಂದಿದ್ದೇನೆ. ಈಗ ಪ್ರತಿದಿನ ವಸಾಹತುಗಾರರು, ಹಿಂಸಾಚಾರ ಮಾಡುತ್ತಿದ್ದಾರೆ, ಮನೆಗಳನ್ನು ಉರುಳಿಸುತ್ತಿದ್ದಾರೆ. ಬಲವಂತದಿಂದ ಸ್ಥಳಾಂತರ ಮಾಡುತ್ತಿದ್ದಾರೆ. ನನ್ನ ಸಮುದಾಯ ಇಸ್ರೇಲ್‌ ಆಕ್ರಮಣವನ್ನು ಎದುರಿಸಿಕೊಂಡೇ ಪ್ರತಿದಿನ ವಾಸಿಸುತ್ತಿದೆ ಮತ್ತು ಅನುಭವಿಸುತ್ತಿದೆ” ಎಂದು ಆದ್ರಾ ಹೇಳಿದ್ದಾರೆ.

“ಪ್ಯಾಲೆಸ್ತೀನಿಯನ್ ಜನರ ಮೇಲಿನ ಅನ್ಯಾಯ ಮತ್ತು ಜನಾಂಗೀಯ ನಿರ್ಮೂಲನೆಯನ್ನು ನಿಲ್ಲಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಅವರು ಜಗತ್ತಿಗೆ ಕರೆ ನೀಡಿದ್ದಾರೆ.

ಪ್ಯಾಲೆಸ್ತೀನಿಯರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಇಸ್ರೇಲ್ ಪತ್ರಕರ್ತ ಯುವಲ್ ಅಬ್ರಹಾಂ, “ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲಿಗರಾದ ನಾವು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸಿದ್ದೇವೆ. ಕಾರಣ, ನಮ್ಮ ಧ್ವನಿಗಳು ಶಕ್ತಿಶಾಲಿಯಾಗಿವೆ. ಅಂತ್ಯಗೊಳ್ಳಲೇಬೇಕಾದ ಗಾಝಾ ಹಾಗೂ ಅಲ್ಲಿನ ಜನರ ವಿನಾಶವನ್ನು ನಾವಿಬ್ಬರೂ ನೋಡುತ್ತಿದ್ದೇವೆ. ಅಕ್ಟೋಬರ್ 7ರಂದು ಅತ್ಯಂತ ಅಮಾನುಷವಾಗಿ ಒತ್ತೆಯಾಳುಗಳನ್ನಾಗಿಸಿಕೊಳ್ಳಲಾಗಿರುವ ಇಸ್ರೇಲ್ ಪ್ರಜೆಗಳನ್ನು ಕೂಡ ಬಿಡುಗಡೆ ಮಾಡಲೇಬೇಕು” ಎಂದಿದ್ದಾರೆ.

ತಮ್ಮಿಬ್ಬರ ನಡುವಿನ ಅಸಮಾನತೆಯ ಮೇಲೂ ಬೆಳಕು ಚೆಲ್ಲಿದ ಅಬ್ರಹಾಂ, “ನಾನು ನಾಗರಿಕ ಕಾನೂನುಗಳಿರುವ ಪ್ರಭುತ್ವದಡಿ ಸ್ವತಂತ್ರವಾಗಿ ಜೀವಿಸುತ್ತಿದ್ದರೆ, ತನ್ನ ಜೀವನವನ್ನು ನಾಶಗೊಳಿಸಿದ ಹಾಗೂ ಅದನ್ನು ತನ್ನಿಂದ ತಡೆಯಲಾಗದ ಆದ್ರಾ ಸೇನಾ ಕಾನೂನುಗಳ ಆಡಳಿತದಡಿ ಜೀವಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಿಕ್ಕಟ್ಟಿಗೆ ಭಿನ್ನ ದಾರಿಯಿದ್ದು, ಜನಾಂಗೀಯ ಮೇಲರಿಮೆಯಿಲ್ಲದ, ಎರಡೂ ಕಡೆಯ ಜನರಿಗೆ ರಾಷ್ಟ್ರೀಯ ಹಕ್ಕುಗಳಿರುವ ರಾಜಕೀಯ ಪರಿಹಾರ ಸಾಧ್ಯವಿದೆ” ಎಂದೂ ಅವರು ಸಲಹೆ ನೀಡಿದ್ದಾರೆ.

ಅಮೆರಿಕ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅಬ್ರಹಾಂ, “ಆದ್ರಾ ಅವರ ಜನರಿಗೆ ನೈಜ ಸ್ವಾತಂತ್ರ್ಯ ದೊರೆತಾಗ ಮಾತ್ರ ನಾವು ಸುರಕ್ಷಿತ ಎಂಬಂತೆ ನಾವಿಬ್ಬರೂ ಪರಸ್ಪರ ಬೆಸೆದುಕೊಂಡಿರುವುದು ನಿಮಗೇಕೆ ಕಾಣುತ್ತಿಲ್ಲ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಾಲ್ವರು ಹೋರಾಟಗಾರರು ಒಟ್ಟಾಗಿ ನಿರ್ಮಿಸಿದ್ದು, ಸದ್ಯ ಮುಂದುವರಿದಿರುವ ಪ್ರಾಂತೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಕ್ಕಾಗಿ ತೋರುವ ಪ್ರತಿರೋಧದ ಕ್ರಿಯೆಯನ್ನು ಈ ಸಾಕ್ಷ್ಯಚಿತ್ರ ಮಂಡಿಸುತ್ತದೆ.

ಬರ್ಲಿನ್ 74ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ‘ನೋ ಅದರ್ ಲ್ಯಾಂಡ್’ ಆಯ್ಕೆಯಾಗಿತ್ತು. ಫೆಬ್ರವರಿ 14, 2024ರಂದು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಸಾಕ್ಷ್ಯಚಿತ್ರವು, ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪನೋರಮಾ ಪ್ರೇಕ್ಷಕರ ಪ್ರಶಸ್ತಿ ಹಾಗೂ ಬರ್ಲಿನ್ ಸಾಕ್ಷ್ಯಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...