Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಪ್ಯಾಲೆಸ್ತೀನಿಯರ ಜನಾಂಗೀಯ ನಿರ್ಮೂಲನೆ ನಿಲ್ಲಿಸಲು ಚಿತ್ರ ತಂಡ ಆಗ್ರಹ

- Advertisement -
- Advertisement -

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ ಜೊತೆಗಿನ ಸ್ಪರ್ಧೆಯಲ್ಲಿ ಭಾನುವಾರ (ಮಾ.2) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

2019 ಮತ್ತು 2023ರ ನಡುವೆ ‘ನೋ ಅದರ್ ಲ್ಯಾಂಡ್’ ಚಿತ್ರವನ್ನು ನಿರ್ಮಿಸಲಾಗಿದೆ. ಆ ಬಳಿಕ ನಿರ್ದೇಶಕರ ಪೈಕಿ ಒಬ್ಬರಾದ ಬೇಸಲ್ ಅದ್ರಾ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಬೇಸಲ್ ಅದ್ರಾ ಅವರ ಹುಟ್ಟೂರು ಮಸಾಫರ್ ಯಟ್ಟಾವನ್ನು ಇಸ್ರೇಲ್‌ ಸೈನಿಕರು ಆಕ್ರಮಿಸಿಕೊಂಡು ಪಶ್ಚಿಮ ದಂಡೆಯ ದಕ್ಷಿಣ ತುದಿಯನ್ನು ಮಿಲಿಟರಿ ತರಬೇತಿ ವಲಯವಾಗಿ ನಿರ್ಮಿಸಲು ಮುಂದಾಗಿದ್ದ ಬಗ್ಗೆ ಚಿತ್ರ ಗಮನ ಸೆಳೆದಿತ್ತು.

ಆದ್ರಾ ಅವರು ಯಹೂದಿ-ಇಸ್ರೇಲಿ ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸುವವರೆಗೂ ಅವರ ಧ್ವನಿಯನ್ನು ಕೇಳುವವರು ಇರಲಿಲ್ಲ. ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸಿದ ನಂತರ, ಅವರು ಆದ್ರಾ ಅವರ ಕಥೆಯನ್ನು ಹೊರ ಜಗತ್ತಿಗೆ ತಿಳಿಸಲು ಸಹಾಯ ಮಾಡುತ್ತಾರೆ.

ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಆದ್ರಾ, ‘ನೋ ಅದರ್ ಲ್ಯಾಂಡ್’ ಪ್ಯಾಲೆಸ್ತೀನಿಯರು ದಶಕಗಳಿಂದ ಅನುಭವಿಸುತ್ತಿರುವ ಕಠೋರ ವಾಸ್ತವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಎರಡು ತಿಂಗಳ ಹಿಂದೆಯಷ್ಟೇ ನಾನು ತಂದೆಯಾದೆ. ನನ್ನ ಮಗಳು ನಾನು ಈಗ ಬದುಕುತ್ತಿರುವಂತೆ ಬದುಕಬಾರದು ಎಂಬ ಆಶಯವನ್ನು ಹೊಂದಿದ್ದೇನೆ. ಈಗ ಪ್ರತಿದಿನ ವಸಾಹತುಗಾರರು, ಹಿಂಸಾಚಾರ ಮಾಡುತ್ತಿದ್ದಾರೆ, ಮನೆಗಳನ್ನು ಉರುಳಿಸುತ್ತಿದ್ದಾರೆ. ಬಲವಂತದಿಂದ ಸ್ಥಳಾಂತರ ಮಾಡುತ್ತಿದ್ದಾರೆ. ನನ್ನ ಸಮುದಾಯ ಇಸ್ರೇಲ್‌ ಆಕ್ರಮಣವನ್ನು ಎದುರಿಸಿಕೊಂಡೇ ಪ್ರತಿದಿನ ವಾಸಿಸುತ್ತಿದೆ ಮತ್ತು ಅನುಭವಿಸುತ್ತಿದೆ” ಎಂದು ಆದ್ರಾ ಹೇಳಿದ್ದಾರೆ.

“ಪ್ಯಾಲೆಸ್ತೀನಿಯನ್ ಜನರ ಮೇಲಿನ ಅನ್ಯಾಯ ಮತ್ತು ಜನಾಂಗೀಯ ನಿರ್ಮೂಲನೆಯನ್ನು ನಿಲ್ಲಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಅವರು ಜಗತ್ತಿಗೆ ಕರೆ ನೀಡಿದ್ದಾರೆ.

ಪ್ಯಾಲೆಸ್ತೀನಿಯರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಇಸ್ರೇಲ್ ಪತ್ರಕರ್ತ ಯುವಲ್ ಅಬ್ರಹಾಂ, “ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲಿಗರಾದ ನಾವು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸಿದ್ದೇವೆ. ಕಾರಣ, ನಮ್ಮ ಧ್ವನಿಗಳು ಶಕ್ತಿಶಾಲಿಯಾಗಿವೆ. ಅಂತ್ಯಗೊಳ್ಳಲೇಬೇಕಾದ ಗಾಝಾ ಹಾಗೂ ಅಲ್ಲಿನ ಜನರ ವಿನಾಶವನ್ನು ನಾವಿಬ್ಬರೂ ನೋಡುತ್ತಿದ್ದೇವೆ. ಅಕ್ಟೋಬರ್ 7ರಂದು ಅತ್ಯಂತ ಅಮಾನುಷವಾಗಿ ಒತ್ತೆಯಾಳುಗಳನ್ನಾಗಿಸಿಕೊಳ್ಳಲಾಗಿರುವ ಇಸ್ರೇಲ್ ಪ್ರಜೆಗಳನ್ನು ಕೂಡ ಬಿಡುಗಡೆ ಮಾಡಲೇಬೇಕು” ಎಂದಿದ್ದಾರೆ.

ತಮ್ಮಿಬ್ಬರ ನಡುವಿನ ಅಸಮಾನತೆಯ ಮೇಲೂ ಬೆಳಕು ಚೆಲ್ಲಿದ ಅಬ್ರಹಾಂ, “ನಾನು ನಾಗರಿಕ ಕಾನೂನುಗಳಿರುವ ಪ್ರಭುತ್ವದಡಿ ಸ್ವತಂತ್ರವಾಗಿ ಜೀವಿಸುತ್ತಿದ್ದರೆ, ತನ್ನ ಜೀವನವನ್ನು ನಾಶಗೊಳಿಸಿದ ಹಾಗೂ ಅದನ್ನು ತನ್ನಿಂದ ತಡೆಯಲಾಗದ ಆದ್ರಾ ಸೇನಾ ಕಾನೂನುಗಳ ಆಡಳಿತದಡಿ ಜೀವಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಿಕ್ಕಟ್ಟಿಗೆ ಭಿನ್ನ ದಾರಿಯಿದ್ದು, ಜನಾಂಗೀಯ ಮೇಲರಿಮೆಯಿಲ್ಲದ, ಎರಡೂ ಕಡೆಯ ಜನರಿಗೆ ರಾಷ್ಟ್ರೀಯ ಹಕ್ಕುಗಳಿರುವ ರಾಜಕೀಯ ಪರಿಹಾರ ಸಾಧ್ಯವಿದೆ” ಎಂದೂ ಅವರು ಸಲಹೆ ನೀಡಿದ್ದಾರೆ.

ಅಮೆರಿಕ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅಬ್ರಹಾಂ, “ಆದ್ರಾ ಅವರ ಜನರಿಗೆ ನೈಜ ಸ್ವಾತಂತ್ರ್ಯ ದೊರೆತಾಗ ಮಾತ್ರ ನಾವು ಸುರಕ್ಷಿತ ಎಂಬಂತೆ ನಾವಿಬ್ಬರೂ ಪರಸ್ಪರ ಬೆಸೆದುಕೊಂಡಿರುವುದು ನಿಮಗೇಕೆ ಕಾಣುತ್ತಿಲ್ಲ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಾಲ್ವರು ಹೋರಾಟಗಾರರು ಒಟ್ಟಾಗಿ ನಿರ್ಮಿಸಿದ್ದು, ಸದ್ಯ ಮುಂದುವರಿದಿರುವ ಪ್ರಾಂತೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಕ್ಕಾಗಿ ತೋರುವ ಪ್ರತಿರೋಧದ ಕ್ರಿಯೆಯನ್ನು ಈ ಸಾಕ್ಷ್ಯಚಿತ್ರ ಮಂಡಿಸುತ್ತದೆ.

ಬರ್ಲಿನ್ 74ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ‘ನೋ ಅದರ್ ಲ್ಯಾಂಡ್’ ಆಯ್ಕೆಯಾಗಿತ್ತು. ಫೆಬ್ರವರಿ 14, 2024ರಂದು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಸಾಕ್ಷ್ಯಚಿತ್ರವು, ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪನೋರಮಾ ಪ್ರೇಕ್ಷಕರ ಪ್ರಶಸ್ತಿ ಹಾಗೂ ಬರ್ಲಿನ್ ಸಾಕ್ಷ್ಯಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...