Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಪ್ಯಾಲೆಸ್ತೀನಿಯರ ಜನಾಂಗೀಯ ನಿರ್ಮೂಲನೆ ನಿಲ್ಲಿಸಲು ಚಿತ್ರ ತಂಡ ಆಗ್ರಹ

- Advertisement -
- Advertisement -

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ ಜೊತೆಗಿನ ಸ್ಪರ್ಧೆಯಲ್ಲಿ ಭಾನುವಾರ (ಮಾ.2) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ.

2019 ಮತ್ತು 2023ರ ನಡುವೆ ‘ನೋ ಅದರ್ ಲ್ಯಾಂಡ್’ ಚಿತ್ರವನ್ನು ನಿರ್ಮಿಸಲಾಗಿದೆ. ಆ ಬಳಿಕ ನಿರ್ದೇಶಕರ ಪೈಕಿ ಒಬ್ಬರಾದ ಬೇಸಲ್ ಅದ್ರಾ ಅವರು ಬಂಧನ ಭೀತಿ ಎದುರಿಸುತ್ತಿದ್ದರು. ಬೇಸಲ್ ಅದ್ರಾ ಅವರ ಹುಟ್ಟೂರು ಮಸಾಫರ್ ಯಟ್ಟಾವನ್ನು ಇಸ್ರೇಲ್‌ ಸೈನಿಕರು ಆಕ್ರಮಿಸಿಕೊಂಡು ಪಶ್ಚಿಮ ದಂಡೆಯ ದಕ್ಷಿಣ ತುದಿಯನ್ನು ಮಿಲಿಟರಿ ತರಬೇತಿ ವಲಯವಾಗಿ ನಿರ್ಮಿಸಲು ಮುಂದಾಗಿದ್ದ ಬಗ್ಗೆ ಚಿತ್ರ ಗಮನ ಸೆಳೆದಿತ್ತು.

ಆದ್ರಾ ಅವರು ಯಹೂದಿ-ಇಸ್ರೇಲಿ ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸುವವರೆಗೂ ಅವರ ಧ್ವನಿಯನ್ನು ಕೇಳುವವರು ಇರಲಿಲ್ಲ. ಪತ್ರಕರ್ತ ಯುವಲ್ ಅಬ್ರಹಾಂ ಜೊತೆ ಸ್ನೇಹ ಬೆಳೆಸಿದ ನಂತರ, ಅವರು ಆದ್ರಾ ಅವರ ಕಥೆಯನ್ನು ಹೊರ ಜಗತ್ತಿಗೆ ತಿಳಿಸಲು ಸಹಾಯ ಮಾಡುತ್ತಾರೆ.

ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಆದ್ರಾ, ‘ನೋ ಅದರ್ ಲ್ಯಾಂಡ್’ ಪ್ಯಾಲೆಸ್ತೀನಿಯರು ದಶಕಗಳಿಂದ ಅನುಭವಿಸುತ್ತಿರುವ ಕಠೋರ ವಾಸ್ತವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಎರಡು ತಿಂಗಳ ಹಿಂದೆಯಷ್ಟೇ ನಾನು ತಂದೆಯಾದೆ. ನನ್ನ ಮಗಳು ನಾನು ಈಗ ಬದುಕುತ್ತಿರುವಂತೆ ಬದುಕಬಾರದು ಎಂಬ ಆಶಯವನ್ನು ಹೊಂದಿದ್ದೇನೆ. ಈಗ ಪ್ರತಿದಿನ ವಸಾಹತುಗಾರರು, ಹಿಂಸಾಚಾರ ಮಾಡುತ್ತಿದ್ದಾರೆ, ಮನೆಗಳನ್ನು ಉರುಳಿಸುತ್ತಿದ್ದಾರೆ. ಬಲವಂತದಿಂದ ಸ್ಥಳಾಂತರ ಮಾಡುತ್ತಿದ್ದಾರೆ. ನನ್ನ ಸಮುದಾಯ ಇಸ್ರೇಲ್‌ ಆಕ್ರಮಣವನ್ನು ಎದುರಿಸಿಕೊಂಡೇ ಪ್ರತಿದಿನ ವಾಸಿಸುತ್ತಿದೆ ಮತ್ತು ಅನುಭವಿಸುತ್ತಿದೆ” ಎಂದು ಆದ್ರಾ ಹೇಳಿದ್ದಾರೆ.

“ಪ್ಯಾಲೆಸ್ತೀನಿಯನ್ ಜನರ ಮೇಲಿನ ಅನ್ಯಾಯ ಮತ್ತು ಜನಾಂಗೀಯ ನಿರ್ಮೂಲನೆಯನ್ನು ನಿಲ್ಲಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಅವರು ಜಗತ್ತಿಗೆ ಕರೆ ನೀಡಿದ್ದಾರೆ.

ಪ್ಯಾಲೆಸ್ತೀನಿಯರ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗಿರುವ ಸಾಕ್ಷ್ಯಚಿತ್ರದ ಕುರಿತು ಮಾತನಾಡಿದ ಇಸ್ರೇಲ್ ಪತ್ರಕರ್ತ ಯುವಲ್ ಅಬ್ರಹಾಂ, “ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲಿಗರಾದ ನಾವು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸಿದ್ದೇವೆ. ಕಾರಣ, ನಮ್ಮ ಧ್ವನಿಗಳು ಶಕ್ತಿಶಾಲಿಯಾಗಿವೆ. ಅಂತ್ಯಗೊಳ್ಳಲೇಬೇಕಾದ ಗಾಝಾ ಹಾಗೂ ಅಲ್ಲಿನ ಜನರ ವಿನಾಶವನ್ನು ನಾವಿಬ್ಬರೂ ನೋಡುತ್ತಿದ್ದೇವೆ. ಅಕ್ಟೋಬರ್ 7ರಂದು ಅತ್ಯಂತ ಅಮಾನುಷವಾಗಿ ಒತ್ತೆಯಾಳುಗಳನ್ನಾಗಿಸಿಕೊಳ್ಳಲಾಗಿರುವ ಇಸ್ರೇಲ್ ಪ್ರಜೆಗಳನ್ನು ಕೂಡ ಬಿಡುಗಡೆ ಮಾಡಲೇಬೇಕು” ಎಂದಿದ್ದಾರೆ.

ತಮ್ಮಿಬ್ಬರ ನಡುವಿನ ಅಸಮಾನತೆಯ ಮೇಲೂ ಬೆಳಕು ಚೆಲ್ಲಿದ ಅಬ್ರಹಾಂ, “ನಾನು ನಾಗರಿಕ ಕಾನೂನುಗಳಿರುವ ಪ್ರಭುತ್ವದಡಿ ಸ್ವತಂತ್ರವಾಗಿ ಜೀವಿಸುತ್ತಿದ್ದರೆ, ತನ್ನ ಜೀವನವನ್ನು ನಾಶಗೊಳಿಸಿದ ಹಾಗೂ ಅದನ್ನು ತನ್ನಿಂದ ತಡೆಯಲಾಗದ ಆದ್ರಾ ಸೇನಾ ಕಾನೂನುಗಳ ಆಡಳಿತದಡಿ ಜೀವಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬಿಕ್ಕಟ್ಟಿಗೆ ಭಿನ್ನ ದಾರಿಯಿದ್ದು, ಜನಾಂಗೀಯ ಮೇಲರಿಮೆಯಿಲ್ಲದ, ಎರಡೂ ಕಡೆಯ ಜನರಿಗೆ ರಾಷ್ಟ್ರೀಯ ಹಕ್ಕುಗಳಿರುವ ರಾಜಕೀಯ ಪರಿಹಾರ ಸಾಧ್ಯವಿದೆ” ಎಂದೂ ಅವರು ಸಲಹೆ ನೀಡಿದ್ದಾರೆ.

ಅಮೆರಿಕ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅಬ್ರಹಾಂ, “ಆದ್ರಾ ಅವರ ಜನರಿಗೆ ನೈಜ ಸ್ವಾತಂತ್ರ್ಯ ದೊರೆತಾಗ ಮಾತ್ರ ನಾವು ಸುರಕ್ಷಿತ ಎಂಬಂತೆ ನಾವಿಬ್ಬರೂ ಪರಸ್ಪರ ಬೆಸೆದುಕೊಂಡಿರುವುದು ನಿಮಗೇಕೆ ಕಾಣುತ್ತಿಲ್ಲ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಸಾಕ್ಷ್ಯಚಿತ್ರವನ್ನು ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಾಲ್ವರು ಹೋರಾಟಗಾರರು ಒಟ್ಟಾಗಿ ನಿರ್ಮಿಸಿದ್ದು, ಸದ್ಯ ಮುಂದುವರಿದಿರುವ ಪ್ರಾಂತೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಕ್ಕಾಗಿ ತೋರುವ ಪ್ರತಿರೋಧದ ಕ್ರಿಯೆಯನ್ನು ಈ ಸಾಕ್ಷ್ಯಚಿತ್ರ ಮಂಡಿಸುತ್ತದೆ.

ಬರ್ಲಿನ್ 74ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ‘ನೋ ಅದರ್ ಲ್ಯಾಂಡ್’ ಆಯ್ಕೆಯಾಗಿತ್ತು. ಫೆಬ್ರವರಿ 14, 2024ರಂದು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಸಾಕ್ಷ್ಯಚಿತ್ರವು, ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪನೋರಮಾ ಪ್ರೇಕ್ಷಕರ ಪ್ರಶಸ್ತಿ ಹಾಗೂ ಬರ್ಲಿನ್ ಸಾಕ್ಷ್ಯಚಿತ್ರ ಪ್ರಶಸ್ತಿಗೆ ಭಾಜನವಾಗಿತ್ತು.

ಪಾಕಿಸ್ತಾನದ ಜನಪ್ರಿಯ ಲೇಖಕಿ ಬಾಪ್ಸಿ ಸಿಧ್ವಾ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...