Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...