Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌...

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ಮುಂಬರುವ ನಾಗರಿಕ ಸ್ಥಳೀಯಚುನಾವಣೆಗೆ ಮುಂಚಿತವಾಗಿ, ಬಿಜೆಪಿಯಿಂದ ಮುಂಬೈಗಿರುವ ಸನ್ನಿಹಿತ ಅಪಾಯವನ್ನು ನೋಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ನ ಮರಾಠಿ ನಾಯಕತ್ವವು ಆಂತರಿಕ ಭಿನ್ನಾಭಿಪ್ರಾಯಗಳನ್ನು...

ಗುರುಗ್ರಾಮ: ಚಲಿಸುವ ಕಾರಿನಿಂದ ರಸ್ತೆಗೆ ಮೂತ್ರ ವಿಸರ್ಜಸಿ ವಿಕೃತಿ ಮೆರೆದ ಯುವಕ

ಹರಿಯಾಣದ ಗುರುಗ್ರಾಮದಿಂದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದ ಸದರ್ ಬಜಾರ್ ಪ್ರದೇಶದ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುವ ಥಾರ್‌ನ ಕಿಟಕಿಯಿಂದ ಮೂತ್ರ ವಿಸರ್ಜನೆ ಮಾಡಿದ್ದಾನೆ. ಯುವಕ ಸೋಹ್ನಾ ಚೌಕ್‌ನಿಂದ ಸದರ್ ಬಜಾರ್...

ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ,...

ನವೆಂಬರ್ 4 ರಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ; 6 ರಂದು ಫಲಿತಾಂಶ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣಾ ಸಮಿತಿಯು ಗುರುವಾರ 2025-26 ರ ವಿದ್ಯಾರ್ಥಿ ಚುನಾವಣೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನವೆಂಬರ್ 4 ರಂದು ಮತದಾನ ಮತ್ತು ನವೆಂಬರ್ 6 ರಂದು...

ನಿರ್ದಿಷ್ಟ ಜಾತಿ, ವಂಶಾವಳಿಯಿಂದ ದೇವಾಲಯಗಳ ಅರ್ಚಕರ ನೇಮಕ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಕೇರಳ ಹೈಕೋರ್ಟ್

ದೇವಾಲಯಗಳ ಅರ್ಚಕರ ನೇಮಕಾತಿಯು ಒಂದು ನಿರ್ದಿಷ್ಟ ಜಾತಿ ಅಥವಾ ವಂಶಾವಳಿಯಿಂದ ಮಾತ್ರ ಆಗಿರಬೇಕು ಎಂದು ಯಾರೂ ಒತ್ತಾಯಿಸಲು ಸಾಧ್ಯವಿಲ್ಲ. ಅಂತಹ ಜಾತಿ ಅಥವಾ ವಂಶಾಧಾರಿತ ನೇಮಕಾತಿಯು ಭಾರತದ ಸಂವಿಧಾನದಡಿ ರಕ್ಷಣೆ ಪಡೆಯಲು ಕಡ್ಡಾಯ...

ಪಶ್ಚಿಮ ಬಂಗಾಳ: ಸರ್ಕಾರಿ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಗರ ಪೊಲೀಸ್...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ...

ಆಂಧ್ರಪ್ರದೇಶ| ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ 'ಲೈಂಗಿಕ ದೌರ್ಜನ್ಯ'ಕ್ಕೆ ಸಂಬಂಧಿಸಿದ ಪ್ರಕರಣವು ಯಾರೂ ಊಹಿಸದ ತಿರುವು ಪಡೆದುಕೊಂಡಿದೆ. ಪೋಕ್ಸೋ ಪ್ರಕರಣದ ಆರೋಪಿ ನಾರಾಯಣ ರಾವ್ ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಆತ...

ಬಿಹಾರ ಚುನಾವಣೆ| ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್

ಮಿತ್ರ ಪಕ್ಷಗಳ ನಡುವೆ ವಾರಗಳ ಕಾಲ ನಡೆದ ವಾಗ್ವಾದ ಮತ್ತು ತೀವ್ರ ಚರ್ಚೆಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಯಿತು. ಈ ಮೂಲಕ ವಿರೋಧ...