Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...