Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....