Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...