Homeಅಂತರಾಷ್ಟ್ರೀಯಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅಡುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಇಸ್ರೇಲ್ ಬೈಬಲ್ ಮತ್ತು ಐತಿಹಾಸಿಕ ಸಂಬಂಧಗಳನ್ನು ಉಲ್ಲೇಖಿಸುವ ಪ್ರದೇಶವಾದ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳಬೇಕೆಂದು ನೆತನ್ಯಾಹು ಅವರ ಒಕ್ಕೂಟದ ಸದಸ್ಯರು ವರ್ಷಗಳಿಂದ ಇಸ್ರೇಲ್‌ಗೆ ಕರೆ ನೀಡುತ್ತಿದ್ದಾರೆ.

1967ರ ಯುದ್ಧದಲ್ಲಿ ವಶಪಡಿಸಿಕೊಂಡ ಪ್ರದೇಶಗಳು ವಿವಾದಿತ ಭೂಮಿಯಲ್ಲಿ ಇರುವುದರಿಂದ ಅವುಗಳನ್ನು ಕಾನೂನುಬದ್ಧವಾಗಿ ಆಕ್ರಮಿಸಲಾಗಿಲ್ಲ ಎಂದು ಇಸ್ರೇಲ್ ವಾದಿಸುತ್ತಿದೆ. ಆದರೆ, ವಿಶ್ವಸಂಸ್ಥೆ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಸಮುದಾಯವು ಅವುಗಳನ್ನು ಆಕ್ರಮಿತವೆಂದು ಪರಿಗಣಿಸಿದೆ.

2024ರಲ್ಲಿ ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವು ಪಶ್ಚಿಮ ದಂಡೆ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳ ಮೇಲಿನ ಇಸ್ರೇಲ್‌ನ ಆಕ್ರಮಣ ಮತ್ತು ಅಲ್ಲಿನ ಅದರ ವಸಾಹತುಗಳು ಕಾನೂನುಬಾಹಿರವಾಗಿದ್ದು, ಸಾಧ್ಯವಾದಷ್ಟು ಬೇಗ ಅದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಒಂದು ವೇಳೆ ಪಶ್ಚಿಮ ದಂಡೆಯ ಮಸೂದೆ ಅಂಗೀಕಾರವಾದರೂ, ಅದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲು ಇಸ್ರೇಲ್ ಹೆಣಗಾಡಬೇಕಾಗುತ್ತದೆ. ಏಕೆಂದರೆ, ಜೆರುಸಲೆಮ್‌ನ ಅತ್ಯಂತ ನಿರ್ಣಾಯಕ ಬೆಂಬಲಿಗ ಅಮೆರಿಕವು ಈಗಾಗಲೇ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ದಂಡೆಯ ಸ್ವಾಧೀನವು ಇಸ್ರೇಲ್‌ಗೆ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧದಲ್ಲಿ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ವಿಶೇಷವಾಗಿ, ಟ್ರಂಪ್‌ ಅವರ ಮೊದಲ ಅಧಿಕಾರಾವಧಿಯಲ್ಲಿ ನಡೆದ ಅಬ್ರಹಾಂ ಒಪ್ಪಂದದ ಮೂಲಕ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಪ್ರಮುಖ ಅರಬ್ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಶ್ಚಿಮ ದಂಡೆಯ ಸ್ವಾಧೀನವನ್ನು ತಾನು ಸಹಿಸುವುದಿಲ್ಲ ಎಂದು ಘೋಷಿಸಿದೆ. ಇದು ಯುಎಇಗೆ ಒಂದು ಗಂಭೀರ ಸಮಸ್ಯೆಯಾಗಿದೆ ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ದಂಡೆ ಮತ್ತು ಮಾಲೆ ಅದುಮಿಮ್ ಸಂಬಂಧಿತ ಮಸೂದೆಗಳಿಗೆ ಇಸ್ರೇಲ್‌ ಮತ ಚಲಾಯಿಸಿರುವುದನ್ನು ಹಮಾಸ್ ತೀವ್ರವಾಗಿ ಖಂಡಿಸಿದೆ. ಇದು ವಸಾಹತುಗಾರಿಕೆ ಆಕ್ರಮಣದ ಅತ್ಯಂತ ಕೆಟ್ಟ ಸ್ವರೂಪ ಎಂದು ಹಮಾಸ್ ಕಿಡಿಕಾರಿದೆ. ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಇಸ್ರೇಲ್‌ನ ಪ್ರಯತ್ನಗಳು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಹಮಾಸ್ ಒತ್ತಿ ಹೇಳಿದೆ.

ಪಶ್ಚಿಮ ದಂಡೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ವಿಷಯವು ಇಸ್ರೇಲ್‌ನಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿದೆ. ಏಕೆಂದರೆ ಈ ಭೂಮಿಯನ್ನು ಪ್ಯಾಲೆಸ್ತೀನ್‌ನವರು ತಮ್ಮ ಭವಿಷ್ಯದ ರಾಷ್ಟ್ರಕ್ಕಾಗಿ ಬಯಸುತ್ತಿದ್ದಾರೆ. 2020ರ ಚುನಾವಣೆಯಲ್ಲಿ ಈ ಭೂಮಿಯ ಸ್ವಾಧೀನದ ಭರವಸೆಯನ್ನು ನೀಡಿದ್ದ ಇಸ್ರೇಲ್ ಪ್ರಧಾನಿ ನೆತನ್ಯಾಹು, ಯುಎಇ ಮತ್ತು ಬಹ್ರೇನ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸುವ ಒಪ್ಪಂದಕ್ಕೆ ಒಲವು ತೋರಿದ್ದಾರೆ. ಆದರೆ, ಸೆಪ್ಟೆಂಬರ್‌ನಲ್ಲಿ ಕೆಲವು ಪಾಶ್ಚಿಮಾತ್ಯ ದೇಶಗಳು ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡಿದ್ದರು. ಆ ಬಳಿಕ ನೆತನ್ಯಾಹು ಈ ವಿಷಯವನ್ನು ಮತ್ತೆ ಚರ್ಚೆಗೆ ತಂದಿದ್ದಾರೆ.

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...